Breaking News

ಡಿಜೆಹಳ್ಳಿ-ಕೆಜಿಹಳ್ಳಿ ಗಲಭೆ ಕುರಿತು ಕೇಂದ್ರಕ್ಕೆ ವರದಿ

Spread the love

ಬೆಂಗಳೂರು,ಸೆ.3- ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಜೆಹಳ್ಳಿ, ಕೆಜಿಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.

ನವೀನ್ ಎಂಬುವರು ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ ಬೆಂಕಿ ಹಚ್ಚಿ ಗಲಭೆ ನಡೆಸಿದ್ದರು.ಈ ಗಲಭೆಯಲ್ಲಿ ಎಸ್‍ಡಿಪಿಐ ಪಾತ್ರ ಇದೆ ಎನ್ನುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಈ ಸಂಘಟನೆಯನ್ನು ನಿಷೇಧ ಮಾಡಬೇಕೆಂಬ ಒತ್ತಡವೂ ಬಂದಿತ್ತು.  ಅಲ್ಲದೇ ಗಲಭೆಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರ ಇದೆ ಎಂಬ ಅನುಮಾನವಿದೆ. ಈ ಕುರಿತು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದ್ದು, ಗಲಭೆ ಸಂಬಂಧ ಇದುವರೆಗೂ ್ಲ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ