Breaking News

ಸರ್ಕಾರಿ ಶಾಲೆ ಎದುರು ವಾಮಾಚಾರ ಮಾಡಿರುವ ಕುರಿತು ಗ್ರಾಮಸ್ಥರ ಆತಂಕ

Spread the love

ಬಾಗಲಕೋಟೆ: ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಮಾಚಾರ ಮಾಡಿರುವ ಘಟನೆ ಇಳಕಲ್​ ತಾಲೂಕಿನ ಗೋನಾಳ ಎಸ್​ಬಿ ಗ್ರಾಮದಲ್ಲಿ ನಡೆದಿದೆ. ಇದರಿಂದ ಮಕ್ಕಳು, ಗ್ರಾಮಸ್ಥರು ಭಯಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗೇಟ್ ಎದುರು ಎರಡು ಗೊಂಬೆ ಇರಿಸಿ, ಕುಂಕುಮ ಎರಚಿ, ನಿಂಬೆ ಹಣ್ಣುಗಳನ್ನಿಟ್ಟು ವಾಮಾಚಾರ ಮಾಡಲಾಗಿದೆ.

ಈ ಬಗ್ಗೆ ಬೆಳಗಿನ ಜಾವ ಗ್ರಾಮದ ಜನತೆ ನೋಡಿ ಆತಂಕ ವ್ಯಕ್ತಪಡಿಸಿ, ಶಿಕ್ಷಕರು, ಎಸ್​ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತಂದಿದ್ದಾರೆ.ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಶಿಕ್ಷಕರು ಮತ್ತು ಗ್ರಾಮಸ್ಥರು ಸೇರಿಕೊಂಡು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಶಾಲೆಗೆ ವಾಮಾಚಾರ ಮಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಶಿಕ್ಷಕರ ಮೇಲೆಯೋ ಅಥವಾ ಮಕ್ಕಳ ಮೇಲೆ ಈ ರೀತಿ ವಾಮಾಚಾರ ನಡೆಸಿರಬಹುದೇ ಎಂಬುದರ ಕುರಿತು ಸ್ಥಳೀಯರು ಪ್ರಶ್ನಿಸಿದ್ದಾರೆ. ಇದರಿಂದ ಪಾಲಕರು, ಮಕ್ಕಳನ್ನ ಶಾಲೆಗೆ ಕಳಿಸಲು ಹಿಂದೇಟು ಹಾಕಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ