Breaking News

ಕಳೆದಿದ್ದ ಚಿನ್ನಾಭರಣಗಳ ಸೂಟ್ ಕೇಸ್​ ವಾರಸುದಾರರಿಗೆ ತಲುಪಿಸಿದ ಹೋಮ್ ಗಾರ್ಡ್..

Spread the love

ಬೆಂಗಳೂರು : ಪ್ರಯಾಣಿಕರೊಬ್ಬರು ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಗೃಹ ರಕ್ಷಕ ದಳದ ಸಿಬ್ಬಂದಿ ಅವರ ಗುರುರಾಜ್​ ಪ್ರಾಮಾಣಿಕತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ವ್ಯಕ್ತವಾಗ್ತಿದೆ.

ರಮೇಶ್ ಚಂದ್ ಎಂಬುವವರು ನಿನ್ನೆ ರಾತ್ರಿ 9:30ಕ್ಕೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಸೂಟ್ ಕೇಸ್ಅನ್ನು ಕಳೆದುಕೊಂಡಿದ್ದರು. ಈ ಬಗ್ಗೆ ರಮೇಶ್ ಚಂದ್ ಕೆಎಸ್ಆರ್ ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಶೋಧ ನಡೆಸಿದಾಗ ಗೃಹ ರಕ್ಷಕದಳದ ಸಿಬ್ಬಂದಿ ಗುರುರಾಜ್ ಗೆ ಸೂಟ್ ಕೇಸ್ ದೊರೆತಿದ್ದು, ಅದನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ