Breaking News

ಜಗನ್‌ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ

Spread the love

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಎ.11ರಂದು ಅವರು ಸಂಪುಟ ಪುನಾರಚನೆ ನಡೆಸಲಿದ್ದಾರೆ.ಹೀಗಾಗಿ, ಹಾಲಿ ಸಚಿವರೆಲ್ಲರ ರಾಜೀನಾಮೆ ನೀಡಲಿದ್ದಾರೆ.

 

ಹಾಲಿ ಇರುವ ಸಚಿವರ ಪೈಕಿ ನಾಲ್ವರು ಸ್ಥಾನ ಉಳಿಸಿಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ.ಜಾತಿ, ಪ್ರಾದೇಶಿಕವಾರು ಪ್ರಾಬಲ್ಯ ಪ್ರಮುಖವಾಗಿ ನೂತನ ಸಚಿವರ ಆಯ್ಕೆಯಲ್ಲಿ ಪ್ರಧಾನವಾಗಲಿದೆ.

2019 ಮೇ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಂದರ್ಭದಲ್ಲಿ “ಅಧಿಕಾರ ಸ್ವೀಕರಿಸಿದ ಎರಡೂವರೆ ವರ್ಷಗಳ ಬಳಿಕ ಸಂಪೂರ್ಣವಾಗಿ ಸಚಿವ ಸಂಪುಟ ಪುನಾರಚನೆ ಮಾಡಲಾಗುತ್ತದೆ’ ಎಂದು ಹೇಳಿದ್ದರು. ಅದರಂತೆ ಈ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ