ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲೀಂ ವ್ಯಾಪಾರ ಬ್ಯಾನ್ ನಡುವೆಯೂ, ಇಂದು ರಾಮನವಮಿಯಂದು ( Rama Navami ), ಸಂಭ್ರಮದಿಂದ ಹಿಂದೂ-ಮುಸ್ಲೀಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ.ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.
