ರಾಜ್ಯ ಸರಕಾರದಿಂದ ನಿವೇಶನ ಇಲ್ಲದ ಬಡ ಜನರಿಗೆ 3 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನ ವಿವಿ ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿಯಿಂದ 1.8 ಲಕ್ಷ ಮನೆಗಳು ಮತ್ತು ರಾಜೀವ್ ಗಾಂಧೀ ಆವಾಸ್ ವಸತಿ ಯೋಜನೆಯಡಿ 1.20 ಲಕ್ಷ ಮನೆಗಳು ಸೇರಿದಂತೆ ಒಟ್ಟು 3 ಲಕ್ಷ ಮನೆ ನಿರ್ಮಿಸಿ ವಸತಿ ರಹಿತ ಬಡಜನತೆಗೆ ವಿತರಿಸಲಾಗುವುದು ಎಂದು ತಿಳಿಸಿದರು.