Breaking News

ಈಶ್ವರಪ್ಪನವರನ್ನು ಮಾತ್ರ ವಜಾ ಮಾಡೋದಲ್ಲ ಮುಖ್ಯಮಂತ್ರಿಯೇ ರಾಜೀನಾಮೆ ಕೊಡಬೇಕು: ಸುರ್ಜೆವಾಲಾ

Spread the love

ಬೆಂಗಳೂರು : ಸಿಎಂ ಬೊಮ್ಮಾಯಿ‌, ಬಿಜೆಪಿ, ಭಜರಂಗದಳ, ಪಿಎಫ್ಐ, ಸಿಎಫ್ಐ ಈ ರಾಜ್ಯದ ಸಾಮರಸ್ಯ ಹಾಳು ಮಾಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಬ್ಬ ಸಚಿವರ ಮೇಲೆ ಆಪಾದನೆ ಬಂದಿದೆ. 40% ಕಮಿಷನ್ ಪಡೀತಿದಾರೆ ಅಂತಾ ಆರೋಪ ಬಂದಿದೆ. ಅವರ ಮೇಲೆ ಕ್ರಮಕೈಗೊಳ್ಳಲಾಗದಷ್ಟು ಸಿಎಂ ವೀಕ್ ಆಗಿದ್ದಾರೆ. ಈಗ ಒಬ್ಬ ಬಿಜೆಪಿ ಕಾರ್ಯಕರ್ತ ಡೆತ್ ನೋಟ್ ಬರೆದಿಟ್ಟು ಹೋಗಿದ್ದಾರೆ. ಯಾಕೆಂದರೆ, ಅವರ ವಿರುದ್ಧ ಕಿರುಕುಳ ಹೆಚ್ಚಾಯ್ತು. ಹೀಗಾಗಿ, ಅವರು ಡೆತ್ ನೋಟ್ ಬರೆದಿಟ್ಟು ಹೋಗಿದ್ದಾರೆ ಎಂದರು.

ಬೊಮ್ಮಾಯಿ‌ ಸರ್ಕಾರ ಭ್ರಷ್ಟಾಚಾರದ ಹೊಸ ಡೆಸಿಬಲ್ ಲೆವೆಪ್ ಸೆಟ್ ಮಾಡ್ತಿದೆ. ನಿತ್ಯ ಸಿಎಂ ಬೊಮ್ಮಾಯಿ‌ ಕೋಮು ವಿಚಾರಗಳ ಹಿಂದೆ ಅಡಗಿ ಕುಳಿತುಕೊಳ್ಳುತ್ತಿದ್ದಾರೆ. ಸಿಎಂ ಬೊಮ್ಮಾಯಿ‌, ಬಿಜೆಪಿ, ಭಜರಂಗದಳ ಮೂರೂ ಸಹ ಪಿಎಫ್ಐ, ಸಿಎಫ್ಐ ಜೊತೆ ಕೈಜೋಡಿಸಿ ಈ ರಾಜ್ಯದ ಸಾಮರಸ್ಯ ಹಾಳು ಮಾಡುತ್ತಿವೆ. ಕೆಲವರು ಬೇಲ್ ಮೇಲಿದ್ದಾರೆ, ಇನ್ನೂ ಕೆಲವರು ಬೇಲ್​ನ ನಿರೀಕ್ಷೆಯಲಿದ್ದಾರೆ. ಅವರೆಲ್ಲರನ್ನೂ ವಜಾ ಮಾಡಬೇಕು. ಇಲ್ಲದಿದ್ದರೆ ಸಿಎಂ ಬೊಮ್ಮಾಯಿ‌ ರಾಜೀನಾಮೆ ಕೊಟ್ಟು ಹೋಗಬೇಕು ಎಂದರು.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ