ಬೆಳಗಾವಿ : ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹಿನ್ನೆಲೆ ಬಿಎಸ್ವೈ ಜೊತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ಪ್ರವಾಸದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಸಂಕಮ್ ಹೋಟೆಲಿನಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.
ಈಶ್ವರಪ್ಪರಿಂದ ರಾಜೀನಾಮೆ ಪಡೆಯುವ ಬಗ್ಗೆ ಬಿಎಸ್ವೈ ಜೊತೆಗೆ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮಾತಿಗೆ ಬಿಎಸ್ವೈ ಸಮ್ಮತಿ ನೀಡಿದ್ದಾರಾ ಎಂಬ ಬಗ್ಗೆ ಖಚಿತ ಮಾಹಿತಿ ತಿಳಿದು ಬಂದಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಇಂದು ರಾತ್ರಿಯೇ ರಾಜೀನಾಮೆ ನೀಡುತ್ತಾರಾ ಕೆ.ಎಸ್. ಈಶ್ವರಪ್ಪ? ಎನ್ನುವ ಪ್ರಶ್ನೆ ಕೂಡ ಉದ್ಭವಿಸಿದೆ.