Breaking News

ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ,: ಈಶ್ವರ್ ಖಂಡ್ರೆ

Spread the love

ಬೆಂಗಳೂರು:ಗುತ್ತಿಗೆದಾರ ಸಂತೋಷ ಪಾಟೀಲ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬಲಿಪಶು ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಮಾಡಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

 

ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ ಪಕ್ಷದ ಕಾರ್ಯಕರ್ತರಿಗೆ ಕೋಟ್ಯಂತರ ರೂಪಾಯಿ ಗುತ್ತಿಗೆಯನ್ನು ವರ್ಕ್ ಆರ್ಡರ್ ಇಲ್ಲದೆ, ಟೆಂಡರ್ ಕರೆಯದೇ ಬಾಯಿ ಮಾತಿನಲ್ಲಿ ಕಾಮಗಾರಿ ಕೊಡುತ್ತಿದ್ದಾರೆ, ನಂತರ ಹಣ ಪಾವತಿ ಮಾಡುತ್ತಿದ್ದಾರೆ ಎಂಬುದೂ ಈ ಪ್ರಕರಣದಿಂದ ಬಹಿರಂಗವಾಗಿದೆ. ಇದು ನಿಯಮ ಬಾಹಿರ ಹಾಗೂ ಪಕ್ಷಪಾತದಿಂದ ಕೂಡಿದೆ, ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!

Spread the loveಕೊಪ್ಪಳ, ನವೆಂಬರ್​ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ