Breaking News

ಪ್ರತಿಭಟನೆ ನಡುವೆಯೇ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅಂತ್ಯಕ್ರಿಯೆ

Spread the love

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಇಂದು ನಡೆಯಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ‌. ಸಂತೋಷ್ ಪಾಟೀಲ್​ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಬೇಗ ಅಂತ್ಯಕ್ರಿಯೆ ಮುಗಿಸುವಂತೆ ಗ್ರಾಮಸ್ಥರು ಕೋರಿದ್ದರು. ಜೊತೆಗೆ ಮೃತ ಸಂತೋಷ್ ಸಂಬಂಧಿಕರು ಮೃತದೇಹದ ಮುಂದೆ ಪ್ರತಿಭಟನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸೋಣ ಎಂದು ಪ್ರತಿಭಟನಾಕರರಿಗೆ ಹೇಳಿದ್ದಾರೆ. ಬಳಿಕ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಜಮೀನಿಗೆ ತಂದು, ಲಿಂಗಾಯತ ವಿಧಿವಿಧಾನಗಳಂತೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ