Breaking News

ನಾಳೆ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಮುಕ್ತನಾಗಿ ಹೊರಬರುವವರೆಗೂ ಸಂಪುಟದಿಂದ ಹೊರಗಿರುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದು, ನಾಳೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಶ್ವರಪ್ಪ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಸುದ್ದಿಗಾರರಿಗೆ ಸಿಎಂ ಪ್ರತಿಕ್ರಿಯೆ ನೀಡಿದರು.

ಇದು ಸಂಜೆ ಸಚಿವ ಕೆ.ಎಸ್ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು, ಆ ವೇಳೆ ರಾಜೀನಾಮೆ ಕೊಡುತ್ತೇನೆ ಅಂತಾ ಹೇಳಿದರು. ನಾನು ನಿರ್ದೋಷಿ, ಈ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಆದರೂ ಇದನ್ನು ಮುಂದುವರೆಸಿಕೊಂಡು ಹೋದರೆ ಅನಗತ್ಯವಾಗಿ ಇತರರಿಗೆ ಮಾತನಾಡಲು ಅವಕಾಶ ಕೊಟ್ಟಂತಾಗಲಿದೆ. ಅಲ್ಲದೆ ಪಕ್ಷದಲ್ಲಿ ಇರಿಸುಮುರಿಸಾಗಬಹುದು. ಹೀಗಾಗಿ ನನ್ನ ಮೇಲೆ ನನಗೆ ನಂಬಿಕೆ ಇದೆ. ಆರೋಪ ಮುಕ್ತನಾಗಿ ಹೊರಬರುತ್ತೇನೆ, ಆದಷ್ಟು ಬೇಗ ತನಿಖೆ ಮುಗಿಯಲಿ, ಸಂಪೂರ್ಣ ತನಿಖೆ ಬಳಿಕ ಉತ್ತರ ಕೊಡುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ