Breaking News

ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣ: H.D.D.

Spread the love

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣವಿದ್ದಂತೆ ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಡಾ.ಬಿ.ಆರ್.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,’ಈ ಪ್ರಕರಣದ ವಿಚಾರದಲ್ಲಿ ಯಾರೆಲ್ಲ ಏನೇನು ಹೇಳಿದ್ದಾರೆ ಎಂಬುದು ಗೊತ್ತಿದೆ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ’ ಎಂದರು.

‘ನಾನು ಕೂಡ ಆಡಳಿತ ನಡೆಸಿದ್ದೇನೆ. ಯಾರ ಕಾಲದಲ್ಲಿ ಏನಾಗಿದೆ, ಎಷ್ಟು ಲಂಚ ಪಡೆದು ಸರ್ಕಾರ ನಡೆಸಿದ್ದಾರೆ ಎಂಬುದರ ಬಗ್ಗೆ ಈಗ ಮಾತನಾಡುವುದಿಲ್ಲಘಿ. ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತೂ ಪ್ರತಿಕ್ರಿಯಿಸುವುದಿಲ್ಲ. ಶೇಕಡ 40ರಷ್ಟು ಲಂಚದ ಆರೋಪದ ಕುರಿತು ಮಾತನಾಡುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ’ ಎಂದು ಹೇಳಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ