Breaking News

River Rafting: ಕಾಳಿ ನದಿಯಲ್ಲಿ ಬೋಟ್​ ಮುಳುಗಡೆ, ಮಕ್ಕಳು ಸೇರಿ 12 ಪ್ರವಾಸಿಗರು ಗ್ರೇಟ್​ ಎಸ್ಕೇಪ್​-

Spread the love

ಕಾರವಾರ: ನಿಗದಿ ಪ್ರಮಾಣಕ್ಕಿಂತ ಹೆಚ್ಚಿನ ಜನರನ್ನು ರಿವರ್ ರ್ಯಾಪ್ಟಿಂಗ್ (River Rafting) ಬೋಟ್​ನಲ್ಲಿ ಕುಳ್ಳಿರಿಸಿ ರ್ಯಾಪ್ಟಿಂಗ್ ಮಾಡಿದ ಪರಿಣಾಮ ನದಿಯಲ್ಲಿ ಬೋಟ್ ಮುಳುಗುವ ಹಂತ ತಲುಪಿ ಮಕ್ಕಳು ಸೇರಿದಂತೆ 12 ಜನ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿಯ ಕಾಳಿ ನದಿಯಲ್ಲಿ ನಡೆದಿದೆ. ರಬ್ಬರ್ ಬೋಟ್​ನಲ್ಲಿ ಆರು ಜನಕ್ಕಿಂತ ಹೆಚ್ಚು ಜನರನ್ನು ಹಾಕಿ ರಿವರ್ ರ್ಯಾಪ್ಟಿಂಗ್ ಮಾಡುವಂತಿಲ್ಲ. ಆದರೆ ಖಾಸಗಿ ಆಯೋಜಕರು ಅನುಮತಿ ಇಲ್ಲದೇ 12 ಜನ ಪ್ರವಾಸಿಗರನ್ನು ಬೋಟ್​ನಲ್ಲಿ ರ್ಯಾಪ್ಟಿಂಗ್​ಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬೋಟ್​ ಬಾರ ಹೆಚ್ಚಾಗಿ ಮುಳುಗುವ ಹಂತ ತಲುಪಿದ್ದು, ನೀರಿನಲ್ಲಿ ಬಿದ್ದಿದ್ದ ಮಕ್ಕಳು ಸೇರಿ 12 ಜನರು ಕೊಚ್ಚಿ ಹೋಗುವ ಮುನ್ನ ಕೂದಲೆಳೆ ಅಂತರದಲ್ಲಿ ಪ್ರವಾಸಿಗರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ. ಪ್ರವಾಸಿಗರು ಲೈಫ್ ಜಾಕೇಟ್ ಹಾಕಿದ ಪರಿಣಾಮ ಅನಾಹುತ ತಪ್ಪಿದೆ. ಘಟನೆ ಸಂಬಂಧ ಜೋಯಿಡಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ

Spread the love ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ ಕ್ರಿಸ್ಮಸ್ ಮತ್ತು ವರ್ಷಾಂತ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ