Breaking News

ತಂದೆ-ಮಗನ ಗಾಂಜಾ ದಂಧೆ.. ಪೊಲೀಸ್​ ದಾಳಿಯಲ್ಲಿ ಸಿಕ್ಕಿಬಿದ್ದ ಪುತ್ರ

Spread the love

ಬೆಂಗಳೂರು : ಮಾದಕ ವಸ್ತು ಮಾರಾಟ ದಂಧೆಯಲ್ಲಿ ಸಕ್ರಿಯನಾಗಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಎಚ್.ಎಸ್.ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಾಧಿಕ್ ಎಂದು ಗುರುತಿಸಲಾಗಿದೆ. ಏಪ್ರಿಲ್ 12ರಂದು‌ ಎಚ್.ಎಸ್.ಆರ್ ಲೇಔಟ್ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಟಿವಿಎಸ್ ಎಕ್ಸೆಲ್ ನಲ್ಲಿ ತಿರುಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯಿಂದ 5 ಕೆ.ಜಿ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಬಳಿಕ ಹೆಚ್ಚಿನ ವಿಚಾರಣೆ ವೇಳೆ ಆರೋಪಿಯು ತನ್ನ ತಂದೆ ಅಮೀರ್ ಜೊತೆಗೂಡಿ, ಒಡಿಶಾದಿಂದ ತಮಿಳುನಾಡಿಗೆ ಗಾಂಜಾ ತರಿಸಿಕೊಂಡು ಬಳಿಕ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದುದಾಗಿ ಹೇಳಿದ್ದಾರೆ. ಆರೋಪಿಯ ಮಾಹಿತಿ ಮೇರೆಗೆ ಒಟ್ಟು 52.50 ಲಕ್ಷ ಮೌಲ್ಯದ 105 ಕೆ.ಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಮಗ ಸಾಧಿಕ್ ಬಂಧನದ ನಂತರ ತಂದೆ ಅಮೀರ್ ನಾಪತ್ತೆಯಾಗಿದ್ದು ಹೆಚ್.ಎಸ್.ಆರ್ ಲೇಔಟ್ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ