Breaking News

ಸುಪಾರಿ ಕೊಟ್ಟು ಅಳಿಯನ ಕೊಲ್ಲಿಸಿದ ಮಾವ!

Spread the love

ಯಾದಾದ್ರಿ ಭುವನಗಿರಿ: ಜಿಲ್ಲೆಯ ಭುವನಗಿರಿ ನಗರದಲ್ಲಿ ಮರ್ಯಾದ ಹತ್ಯೆ ಸಂಚಲನ ಮೂಡಿಸಿದೆ. ಪಟ್ಟಣದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಎರುಕುಲ ರಾಮಕೃಷ್ಣ (32) ಸಿದ್ದಿಪೇಟ್ ಜಿಲ್ಲೆಯ ಲಕುದರಂ ಉಪನಗರದ ಪದ್ದಮ್ಮತಲ್ಲಿ ದೇವಸ್ಥಾನದ ಬಳಿ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ತನ್ನ ಮಗಳನ್ನು ಪ್ರೇಮ ವಿವಾಹವಾಗಿದ್ದಕ್ಕೆ ರಾಮಕೃಷ್ಣನನ್ನು ಆಕೆಯ ಚಿಕ್ಕಪ್ಪ ವೆಂಕಟೇಶ್ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಪತ್ನಿ ಭಾರ್ಗವಿ ನೀಡಿದ ದೂರಿನ ಮೇರೆಗೆ ಅಮೃತಯ್ಯ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಸಂಪೂರ್ಣ ಸತ್ಯ ಬೆಳಕಿಗೆ ಬಂದಿದೆ.

ಏನಿದು ಘಟನೆ: ಭುವನಗಿರಿ ಜಿಲ್ಲೆಯ ವಾಲಿಗೊಂಡ ಮಂಡಲದ ಲಿಂಗರಾಜುಪಲ್ಲಿಯ ನಿವಾಸಿ ಎರುಕುಲ ರಾಮಕೃಷ್ಣ 10 ವರ್ಷಗಳ ಹಿಂದೆ ಗೃಹರಕ್ಷಕನಾಗಿ ಸೇವೆಗೆ ಸೇರಿದ್ದರು. ಮೊದಲು ವಾಲಿಗೊಂಡದಲ್ಲಿ ಕೆಲಸ ಮಾಡಿದ ಅವರು ನಂತರ ಯಾದಗಿರಿಗುಟ್ಟ ಠಾಣೆಗೆ ವರ್ಗಾವಣೆಗೊಂಡಿದ್ದರು. ಯಾದಗಿರಿಗುಟ್ಟ ಮಂಡಲ ಗೌರಾಯಿಪಲ್ಲಿಯ ಪಲ್ಲೆಪಾಟಿ ವೆಂಕಟೇಶ್ ವಿಆರ್‌ವಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ತಾಲೂಕು ಕೇಂದ್ರದಲ್ಲಿ ವಾಸವಾಗಿದ್ದರು. ರಾಮಕೃಷ್ಣ ಮನೆಯ ಪಕ್ಕದಲ್ಲೇ ವಾಸವಾಗಿರುವ ವೆಂಕಟೇಶ್​ ಎಂಬುವರ ಮಗಳು ಭಾರ್ಗವಿ ಜತೆಗಿನ ಪರಿಚಯ ಬಳಿಕ ಪ್ರೇಮವಾಗಿ ಬದಲಾಗಿತ್ತು.

ಅಳಿಯನ ಕೊಲೆ: ಎರಡು ವರ್ಷಗಳ ಹಿಂದೆ ಇಬ್ಬರು ಲವ್​ ಮ್ಯಾರೇಜ್​ ಆಗಿದ್ದರು. 10 ತಿಂಗಳ ಹಿಂದೆ ಭುವನಗಿರಿಗೆ ಬಂದು ವಾಸವಾಗಿದ್ದ ದಂಪತಿಗೆ ಆರು ತಿಂಗಳ ಹಿಂದೆ ಹೆಣ್ಣು ಮಗುವಾಗಿದೆ. ಮಗಳ ಪ್ರೇಮ ವಿವಾಹ ಇಷ್ಟವಾಗದ ವೆಂಕಟೇಶ್ ತನ್ನ ಅಳಿಯನ ಮೇಲೆ ಕೋಪ ಬೆಳೆಸಿಕೊಂಡಿದ್ದರು. ಮದುವೆಯಾದ ಬೆನ್ನಲ್ಲೇ ರಾಮಕೃಷ್ಣನ ಮೇಲೆ ದಾಳಿ ಮಾಡಲು ಮುಂದಾಗಿದ್ದರು. ಆದ್ರೆ ಇತ್ತೀಚೆಗಷ್ಟೇ ತನ್ನ ಆಸ್ತಿಯಲ್ಲಿ ಪಾಲು ಕೋರಿ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಮಗಳು ಹೇಳಿದ್ದಕ್ಕೆ ಅಳಿಯನನ್ನು ಕೊಲೆ ಮಾಡಿಸಿದ್ದಾರೆ ಎಂದು ಪೊಲೀಸರ ತನಿಖೆ ಮೂಲಕ ತಿಳಿದುಬಂದಿದೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ