Breaking News

ಶೇ, 30 ಕಮಿಷನ್ ಆರೋಪ ; ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ: ಸಿಎಂ

Spread the love

ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

‘ಮಠ ಗಳಿಗೆ ಅನುದಾನ ಬಿಡುಗಡೆಗೂ ಶೇಕಡಾ 30 ಕಮಿಷನ್ ನೀಡಬೇಕು’ ಎಂದು ಗಂಭೀರ ಆರೋಪ ಮಾಡಿದ್ದರು.

ಈ ಬಗ್ಗೆ ವಿಧಾನ ಸೌಧದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ”ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳು. ಒಳ್ಳೆ ಹಿನ್ನೆಲೆ ಇದೆ ಅವರಿಗೆ. ಎಲ್ಲಿ ಯಾರಿಗೆ ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ. ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.

”ಅವರ ಮಾತಿಗೆ ಬೆಲೆ ಕೊಡುತ್ತಿದ್ದೇವೆ, ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ಕೊಡಲಿ. ಅದರ ಆಳಕ್ಕೆ ಹೋಗುತ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.

 


Spread the love

About Laxminews 24x7

Check Also

20ನೇ ವಯಸ್ಸಿಗೆ ಭಾರತಕ್ಕೆ ಬಂದು ಗಂಗಾವತಿಯಲ್ಲೇ ನೆಲೆಸಿದ್ದ ಬೆಲ್ಜಿಯಂ ಮಹಿಳೆ ಸಾವು

Spread the loveಗಂಗಾವತಿ: ಪ್ರವಾಸಕ್ಕೆಂದು ಬಂದು ಇಲ್ಲಿನ ಪ್ರಕೃತಿಗೆ ಮಾರುಹೋಗಿ ಕಳೆದ ಹಲವು ದಶಕದಿಂದ ಇಲ್ಲೇ ಒಂಟಿಯಾಗಿ ಬದುಕು ನಡೆಸುತ್ತಿದ್ದ ಬೆಲ್ಜಿಯಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ