Breaking News

ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

Spread the love

ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಗೂ ಸರ್ಕಾರ ಬುಲ್ಡೋಜರ್ ಶಾಕ್ ನೀಡಿದ್ದು, ದೆಹಲಿಯಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಒಡೆದು ಹಾಕಲು ನಗರ ಪಾಲಿಕೆ ಆದೇಶ ನೀಡಿದೆ.

ಹನುಮ ಜಯಂತಿಯಂದು ದೆಹಲಿಯಲ್ಲಿ ನಡೆದ ಜಹಾಂಗೀರ್‌ಪುರಿ ಹಿಂಸಾಚಾರದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿದೆ.

ಹಿಂಸಾಚಾರಕ್ಕೂ ಈ ಆದೇಶಕ್ಕೂ ನೇರ ಸಂಬಂಧ ಇಲ್ಲವಾದರೂ, ಇದು ದಾಳಿಕೋರರಿಗೆ ನೇರ ಸಂದೇಶ ನೀಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ.

ಘಟನೆಯಲ್ಲಿ 8 ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 23 ಜನರನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ