Breaking News

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್

Spread the love

ಬೆಂಗಳೂರು, ಏ.19. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ಯಾವುದೇ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಆದೇಶಿದೆ.

ಮಾಲೂರು ಪುರಸಭೆಯ ಕೆ.ಲಕ್ಷ್ಮೀಕಾಂತ ಸೇರಿ ಆರು ನಾಮ ನಿರ್ದೇಶಿತ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾ.

ಅಲೋಕ್ ಅರಾಧೆ ಮತ್ತು ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ದ ಕಲಂ 243ಆರ್(2)(ಎ) ಸಿಂಧುತ್ವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಕೇಳುವ ಮೂಲಭೂತ ಹಕ್ಕಿಲ್ಲ ಎಂದು ಸಾರಿದೆ.

ನ್ಯಾಯಾಲಯ ಕರ್ನಾಟಕ ಮುನಿಸಿಪಾಲಿಟಿ ಕಾಯಿದೆ 1964 ರ ಸೆಕ್ಷನ್ 11(1)(ಬಿ) ಸಾಂವಿ’ನಿಕ ಸಿಂಧುತ್ವವನ್ನೂ ಸಹ ಎತ್ತಿಹಿಡಿದಿದೆ. ಸೆಕ್ಷನ್ 11(ಬಿ) ಅನ್ನು 243ಆರ್(2)(ಎ)ಗೆ ಅನುಗುಣವಾಗಿ ರೂಪಿಸಲಾಗಿದೆ. ಹಾಗಾಗಿ ಅದೂ ಕೂಡ ಸಂವಿಧಾನಬಾಹಿರವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ