Breaking News

ಕೊಳಚೆ ನೀರಿನಲ್ಲಿ ಮುಳುಗಿ 4 ವರ್ಷದ ಕಂದಮ್ಮ ಸಾವು

Spread the love

ಬಳ್ಳಾರಿ: ಕೊಳಚೆ ನೀರಲ್ಲಿ ಮುಳುಗಿ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೆ ವೀರಾಪುರ ಗ್ರಾಮದಲ್ಲಿ ನಡೆದಿದೆ.

ಕೆ.ವೀರಾಪುರ ಗ್ರಾಮದ ಬಸವರಾಜ್ ಹಾಗೂ ಜ್ಯೋತಿ ಅವರ ನಾಲ್ಕು ವರ್ಷದ ಸೋಮೇಶ್ ಮೃತ ಮಗುವಾಗಿದ್ದು, ಮನೆ ಎದುರು ಆಟವಾಡುತ್ತಿದ್ದ ವೇಳೆ ಕೊಳಚೆ ನೀರಲ್ಲಿ ಬಿದ್ದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಮನೆಯ ಮುಂಭಾಗದಲ್ಲಿ ಮಗು ಕಾಣದ ಹಿನ್ನೆಲೆ ತಾಯಿ ಹುಡುಕಾಟ ನಡೆಸಿದ್ದ ವೇಳೆ ಕೊಳೆಚೆ ನೀರಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ