Breaking News

ಕೊಳಚೆ ನೀರಿನಲ್ಲಿ ಮುಳುಗಿ 4 ವರ್ಷದ ಕಂದಮ್ಮ ಸಾವು

Spread the love

ಬಳ್ಳಾರಿ: ಕೊಳಚೆ ನೀರಲ್ಲಿ ಮುಳುಗಿ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೆ ವೀರಾಪುರ ಗ್ರಾಮದಲ್ಲಿ ನಡೆದಿದೆ.

ಕೆ.ವೀರಾಪುರ ಗ್ರಾಮದ ಬಸವರಾಜ್ ಹಾಗೂ ಜ್ಯೋತಿ ಅವರ ನಾಲ್ಕು ವರ್ಷದ ಸೋಮೇಶ್ ಮೃತ ಮಗುವಾಗಿದ್ದು, ಮನೆ ಎದುರು ಆಟವಾಡುತ್ತಿದ್ದ ವೇಳೆ ಕೊಳಚೆ ನೀರಲ್ಲಿ ಬಿದ್ದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.

ಮನೆಯ ಮುಂಭಾಗದಲ್ಲಿ ಮಗು ಕಾಣದ ಹಿನ್ನೆಲೆ ತಾಯಿ ಹುಡುಕಾಟ ನಡೆಸಿದ್ದ ವೇಳೆ ಕೊಳೆಚೆ ನೀರಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ