Breaking News

BREAKING ಸಿನಿಮೀಯ ರೀತಿಯಲ್ಲಿ ಮೂವರು ವಿಚಾರಣಾಧೀನ ಕೈದಿಗಳು ಎಸ್ಕೇಪ್

Spread the love

ರಾಯಚೂರು: ಮೂವರು ವಿಚಾರಣಾಧೀನ ಕೈದಿಗಳು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಹರ್ಷ, ರಾಜೇಶ್ ಖನ್ನಾ ಮಯ ಹಾಗೂ ಗೋವಿಂದ ಪಲ್ಲು ಪರಾರಿಯಾದ ವಿಚಾರಣಾಧೀನ ಕೈದಿಗಳು.

ಏನಿದು ಪ್ರಕರಣ..?
ಈ ಮೂವರು ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡು ರಾಬರಿ ಮತ್ತು ಕೊಲೆ ಮಾಡಿರುವ ಆರೋಪ ಇದೆ. ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಇವರನ್ನ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು.

ವಿಚಾರಣೆ ಮುಗಿದ ಬಳಿಕ ಜೈಲಿಗೆ ವಾಪಸ್ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಎಸ್ಕೇಪ್ ಆಗಿರುವ ವಿಚಾರಣಾಧೀನ ಕೈದಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ