Breaking News

ಅಂಬುಲೆನ್ಸ್‌ಗೆ ಕರೆ ಮಾಡಿದ್ರೆ ಬಂದಾಗ ಕಳಿಸ್ತೀವಿ ಅಂದ ಸಿಬ್ಬಂದಿ!

Spread the love

ಬೆಂಗಳೂರು: ಕೊರೊನಾ ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲು ಕೆಲವರು ಅಂಬುಲೆನ್ಸ್ ಸಿಗದೆ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಈ ಮಧ್ಯೆ ಅಪಘಾತ ಸಂಭವಿಸಿ ರೋಗಿ ಒದ್ದಾಡುತ್ತಿದ್ದರೂ ಅಂಬುಲೆನ್ಸ್ ಗಳು ಸಿಗುತ್ತಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಸಿಲಿಕಾನ್ ಸಿಟಿಯಲ್ಲೊಂದು ಘಟನೆ ನಡೆದಿದೆ.

ಹೌದು. ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದಾರೆ. ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಘಟನೆಯಿಂದಾಗಿ ವ್ಯಕ್ತಿಯ ಕಾಲಿಗೆ ಏಟು ಬಿದ್ದಿದ್ದು, ಗಂಭೀರ ಗಾಯಗೊಂಡು ಎದ್ದೇಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಒದ್ದಾಡುತ್ತಿದ್ದರು.

ಇದನ್ನು ಅರಿತ ಪ್ರತಿನಿಧಿ ಸ್ಥಳದಲ್ಲಿಯೇ ಅಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಈ ವೇಳೆ, ಅಂಬುಲೆನ್ಸ್ ಇಲ್ಲ. ನಾವೇನ್ ಮಾಡೋಣ ಎಂಬ ಉತ್ತರ ಬಂದಿದೆ. ಅಲ್ಲದೆ ಕೋವಿಡ್ ರೋಗಿಗಳಿಗೆ ಅಂಬುಲೆನ್ಸ್ ಹೋಗಿದೆ. ಹೀಗಾಗಿ ಸದ್ಯ ನಮ್ಮಲ್ಲಿ ಅಂಬುಲೆನ್ಸ್ ಇಲ್ಲ. ಬಂದಾಗ ಕಳುಹಿಸುತ್ತೇವೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಒಂದೆಡೆ ಜನ ಕೊರೊನಾದಿಂದ ಬೆಡ್ ಸಿಗದೆ ಸಾವನ್ನಪ್ಪಿದ್ರೆ, ಇನ್ನೂ ಕೆಲವರು ಅಂಬುಲೆನ್ಸ್ ಸಿಗದೆ ರಸ್ತೆ ಬದಿಯಲ್ಲೇ ನರಳಿ ನರಳಿ ಸಾವನ್ನಪುತ್ತಿದ್ದಾರೆ. ಈ ಮಧ್ಯೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡರೇ ಅಂಬುಲೆನಸ್ ಗಳೇ ಸಿಗದರಿರುವುದು ವಿಪರ್ಯಾಸವಾಗಿದೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ