Breaking News

ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ

Spread the love

ಬಾಗಲಕೋಟೆ: ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಿಸಾನ್ ಕ್ರೇಡಿಟ್ ಕಾರ್ಡ ವಿತರಣೆಗೆ ಏಪ್ರೀಲ್ 24 ರಿಂದ ಮೇ 1 ವರೆಗೆ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವ ಅವರು ನಬಾರ್ಡ ವತಿಯಿಂದ ಕಿಸಾನ್ ಭಾಗಿದಾರಿ ಪ್ರಾಥಮಿಕ್ತಾ ಹಮಾರಿ ಅಭಿಯಾನದ ಅಂಗವಾಗಿ ಕಿಸಾನ್ ಕ್ರೆಡಿಟ್ ಕಾರ್ಡ ವಿತರಣೆಗೆ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಆಂದೋಲದಲ್ಲಿ ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನವಾಗಲಿದೆ. ಜಿಲ್ಲೆಯಲ್ಲಿ ಒಟ್ಟು 220141 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ಜಿಲ್ಲೆಯಲ್ಲಿ ಬಾಗಲಕೋಟೆ ಡಿಸಿಸಿ ಬ್ಯಾಂಕ ನಿಂದ 3,70,809, ಕೆವಿಜಿ ಬ್ಯಾಂಕ್ ವತಿಯಿಂದ 56,315, ವಾಣಿಜ್ಯ ಬ್ಯಾಂಕಗಳಿಂದ 67,584 ಬೆಳೆಸಾಲದ ಕಿಸಾನ್ ಕ್ರೆಡಿಟ್ ಕಾರ್ಡ ಸವಲತ್ತನ್ನು ಒದಗಿಸಿದ್ದಾರೆ. ಪಶುಸಂಗೋಪನೆಗಾಗಿ 5,173 ಮೀನುಗಾರಿಕೆಗಾಗಿ 243 ಕೆಸಿಸಿ ಸವಲತ್ತನ್ನು ಒದಗಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಪಂಚಾಯತ ರಾಜ್, ಕೃಷಿ ಸಂಬಂಧಿತ ಇಲಾಖೆಗಳು, ಸಿಎಸ್ಸಿ ಹಾಗೂ ಬ್ಯಾಂಕಿಂಗ ರವರು ಬಾಗವಹಿಸಿ ಅನುಷ್ಠಾನಗೊಳಿಸಲು ತಿಳಿಸಲಾಗಿದೆ. ಸದರಿ ಯೋಜನೆಗೆ ಓಳಪಡಲು ರೈತರು ಕೇವಲ ಒಂದು ಪುಟದಲ್ಲಿರುವ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ ಎಂದು ತಿಳಿಸಿದರು.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ