Breaking News

ರಥೋತ್ಸವ ಸಂದರ್ಭ ದುರಂತ; ಒಬ್ಬನ ಸಾವು, ಇಬ್ಬರಿಗೆ ಗಾಯ..

Spread the love

ಕಲಬುರಗಿ: ದೇವಸ್ಥಾನದಲ್ಲಿನ ರಥೋತ್ಸವ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಇದರಲ್ಲಿ ಒಬ್ಬ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಈ ಅವಘಡ ಸಂಭವಿಸಿದೆ.

ಈ ದುರಂತದಲ್ಲಿ ಲಕ್ಷ್ಮೀಕಾಂತ್ ಕೆಸಬಳ್ಳಿ (25) ಎಂಬಾತ ಸಾವಿಗೀಡಾಗಿದ್ದು, ಭೀಮಾಶಂಕರ ಪೂಜಾರಿ ಮತ್ತು ಯಂಕಪ್ಪ ನೆಡಲ್​ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಜಿಲ್ಲೆಯ ಶಹಬಾದ್​ ತಾಲೂಕಿನ ರಾವೂರ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಇಂದು ರಥೋತ್ಸವ ನಡೆಯಿತು. ಈ ಸಂದರ್ಭ ಚಲಿಸುತ್ತಿದ್ದ ರಥದ ಗಾಲಿಗೆ ಸಿಲುಕಿ ಲಕ್ಷ್ಮೀಕಾಂತ್ ಮೃತಪಟ್ಟಿದ್ದಾನೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ