Breaking News

ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

Spread the love

ಹುಬ್ಬಳ್ಳಿ: ವಾಟ್ಸ್​ಆಯಪ್​ನಲ್ಲಿ ಎಡಿಟೆಡ್ ವಿಡಿಯೋವೊಂದನ್ನು ಸ್ಟೇಟಸ್ ಆಗಿ ಹಾಕಿಕೊಂಡಿದ್ದನ್ನೇ ನೆಪವಾಗಿಸಿಕೊಂಡು ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

 

ಈ ಮೂಲಕ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಐಎಂಐಎಂ ಪಕ್ಷದ ಮತ್ತೊಬ್ಬ ಮುಖಂಡನ ಬಂಧನ ಆದಂತಾಗಿದೆ. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿಯನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ನಿನ್ನೆ ಎಐಎಂಐಎಂ ಪಕ್ಷದ ಮುಖಂಡ, ಕಾರ್ಪೋರೇಟರ್​ ನಜೀರ್ ಅಹ್ಮದ್ ಹೊನ್ಯಾಳ ಎಂಬಾತನ್ನನು ಪೊಲೀಸರು ಬಂಧಿಸಿದ್ದರು. ಗಲಭೆಯಲ್ಲಿ ಈತನ ಪಾತ್ರ ಇರುವುದು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಚಾರಣೆಯಲ್ಲಿ ಕಂಡುಬಂದಿದ್ದರಿಂದ ಪೊಲೀಸರು ಈತನನ್ನು ಬಂಧಿಸಿದ್ದರು.


Spread the love

About Laxminews 24x7

Check Also

ಚನ್ನಮ್ಮನ ಕಿತ್ತೂರು: ಟೆಂಪೊ ಪಲ್ಟಿ, ಮೂವರು ಸ್ಥಳದಲ್ಲೇ ಸಾವು, ಆರು ಮಂದಿಗೆ ಗಾಯ

Spread the loveಚನ್ನಮ್ಮನ ಕಿತ್ತೂರು: ಇಲ್ಲಿನ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ, ಸಿಮೆಂಟ್‌ ಕಂಬಗಳನ್ನು ಸಾಗಣೆ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ