Breaking News

ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್

Spread the love

ಹೈದರಾಬಾದ್: ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿರುವ ನಾಥುರಾಮ್ ಗೋಡ್ಸೆ ಅವರ ಸಿದ್ಧಾಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ಬೆಂಬಲಿಸುತ್ತಿದ್ದಾರೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ. ರಾಮ್‍ರಾವ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ. ಪ್ರಧಾನಿ ಮೋದಿ ಮೌನವಾಗಿ ಮತ್ತು ನೇರವಾಗಿ ಗೋಡ್ಸೆಯ ಸಿದ್ಧಾಂತವನ್ನು ಪಾಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗುಜರಾತ್ ಶಾಸಕನನ್ನು ಅಸ್ಸಾಂ ಪೊಲೀಸರು ಬಂಧಿಸುವಂತೆ ಮಾಡಿದ ಮೋದಿ ಸರ್ಕಾರಕ್ಕೆ ಧೈರ್ಯವಿದ್ದರೆ ತಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದರು.

ಸಮಾಜದ ಕೆಲವು ವರ್ಗಗಳು ಬೆದರಿಕೆ ಮತ್ತು ಅಸುರಕ್ಷಿತ ಭಾವನೆಗಳನ್ನು ಅನುಭವಿಸುವ ಹಲವಾರು ಘಟನೆಗಳು ದೇಶಾದ್ಯಂತ ನಡೆಯುತ್ತಿವೆ. ಇದೆಲ್ಲವೂ ಸಂಪೂರ್ಣವಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತಿದ್ದರೂ ಪ್ರಧಾನಿ ಅವರು ಒಂದು ಮಾತನ್ನೂ ಹೇಳುತ್ತಿಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ