Breaking News

“ನಾನು ಏನು ಆಗಲ್ಲ ಅಂದ್ಮೇಲೆ ತಕರಾರು ಯಾಕೆ” : ಸಿಎಂ ಎದುರು ಶಾಸಕ ಯತ್ನಾಳ್‌ ಅಸಮಾಧಾನ

Spread the love

ವಿಜಯಪುರ : ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದೆಯೇ ವೇದಿಕೆಯಲ್ಲಿ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದ ಘಟನೆ ನಡೆದಿದೆ.

ಸಧ್ಯ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಶಾಸಕ ಯತ್ನಾಳ್‌, ‘ಮುಂದಿನ ಬಾರಿಯೂ ಬೊಮ್ಮಾಯಿಯವರೇ ಸಿಎಂ ಆಗ್ತಾರೆ.

ಬೊಮ್ಮಾಯಿ ಮತ್ತೆ ಸಿಎಂ ಆದ್ರೆ ನಮಗೇನು ತಕರಾರು ಇಲ್ಲ’ ಎಂದರು. ಆಗ ಯತ್ನಾಳ್‌ ಮಾತಿಗೆ ಸಿಎಂ ಬೊಮ್ಮಾಯಿ ಕೂಡ ಕೈಮುಗಿದ ನಸು ನಕ್ಕರು. ಮಾತು ಮುಂದುವರೆಸಿದ ಶಾಸಕ, ನಮ್ಮದೇನಾದರೂ ತಕರಾರು ಇದೆ ಅಂತಾ ತಿಳಿದುಕೊಂಡ್ರಾ? ಎಂದು ಸಿಎಂರನ್ನ ಪ್ರಶ್ನಿಸಿದರು. ನಾನು ಏನು ಆಗಲ್ಲ ಅಂತಾದ ಮೇಲೆ ತಕರಾರು ಯಾಕೆ? ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದರು


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ