Breaking News

YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

Spread the love

ಹೈದರಾಬಾದ್: ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‍ಆರ್‌ಪಿ) ಬ್ಯಾನರ್‌ಗಳನ್ನು ಹಾನಿಗೊಳಿಸಿದ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಡಳಿತ ನಡೆಸುತ್ತಿರುವ ವೈಎಸ್‍ಆರ್‌ಪಿ ಪೋಸ್ಟರ್‌ಗಳನ್ನು ಹರಿದು ಹಾಕಿದರ ಕುರಿತಂತೆ ವಿಚಾರಣೆ ನಡೆಸಲು ಪೊಲೀಸರು ಅಪ್ರಾಪ್ತ ಬಾಲಕರನ್ನು ಠಾಣೆಗೆ ಕರೆದೊಯ್ದು ಸಂಜೆಯವರೆಗೂ ನೆಲದ ಮೇಲೆ ಕುರಿಸಿಕೊಂಡಿದ್ದರು. 

ಈ ಕುರಿತಂತೆ ಪ್ರತಿಕ್ರಿಯಿಸಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‍ಪಿ) ಜಯರಾಮ್ ಪ್ರಸಾದ್, ಕಟ್ಟಿದ್ದ ವೈಎಸ್‍ಆರ್‌ಪಿ ಪೋಸ್ಟರ್‌ಗಳಿಗೆ ಹಾನಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಚಾರಣೆ ನಡೆಸಲು ನಾವು ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಠಾಣೆಗೆ ಕರೆದಿದ್ದೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ