ಹೈದರಾಬಾದ್: ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಪಿ) ಬ್ಯಾನರ್ಗಳನ್ನು ಹಾನಿಗೊಳಿಸಿದ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಡಳಿತ ನಡೆಸುತ್ತಿರುವ ವೈಎಸ್ಆರ್ಪಿ ಪೋಸ್ಟರ್ಗಳನ್ನು ಹರಿದು ಹಾಕಿದರ ಕುರಿತಂತೆ ವಿಚಾರಣೆ ನಡೆಸಲು ಪೊಲೀಸರು ಅಪ್ರಾಪ್ತ ಬಾಲಕರನ್ನು ಠಾಣೆಗೆ ಕರೆದೊಯ್ದು ಸಂಜೆಯವರೆಗೂ ನೆಲದ ಮೇಲೆ ಕುರಿಸಿಕೊಂಡಿದ್ದರು.
ಈ ಕುರಿತಂತೆ ಪ್ರತಿಕ್ರಿಯಿಸಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಜಯರಾಮ್ ಪ್ರಸಾದ್, ಕಟ್ಟಿದ್ದ ವೈಎಸ್ಆರ್ಪಿ ಪೋಸ್ಟರ್ಗಳಿಗೆ ಹಾನಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಚಾರಣೆ ನಡೆಸಲು ನಾವು ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಠಾಣೆಗೆ ಕರೆದಿದ್ದೇವೆ ಎಂದು ತಿಳಿಸಿದ್ದಾರೆ.