Breaking News

YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

Spread the love

ಹೈದರಾಬಾದ್: ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‍ಆರ್‌ಪಿ) ಬ್ಯಾನರ್‌ಗಳನ್ನು ಹಾನಿಗೊಳಿಸಿದ 3 ಮತ್ತು 4ನೇ ತರಗತಿ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಪಲ್ನಾಡು ಪ್ರದೇಶದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆಡಳಿತ ನಡೆಸುತ್ತಿರುವ ವೈಎಸ್‍ಆರ್‌ಪಿ ಪೋಸ್ಟರ್‌ಗಳನ್ನು ಹರಿದು ಹಾಕಿದರ ಕುರಿತಂತೆ ವಿಚಾರಣೆ ನಡೆಸಲು ಪೊಲೀಸರು ಅಪ್ರಾಪ್ತ ಬಾಲಕರನ್ನು ಠಾಣೆಗೆ ಕರೆದೊಯ್ದು ಸಂಜೆಯವರೆಗೂ ನೆಲದ ಮೇಲೆ ಕುರಿಸಿಕೊಂಡಿದ್ದರು. 

ಈ ಕುರಿತಂತೆ ಪ್ರತಿಕ್ರಿಯಿಸಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‍ಪಿ) ಜಯರಾಮ್ ಪ್ರಸಾದ್, ಕಟ್ಟಿದ್ದ ವೈಎಸ್‍ಆರ್‌ಪಿ ಪೋಸ್ಟರ್‌ಗಳಿಗೆ ಹಾನಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಚಾರಣೆ ನಡೆಸಲು ನಾವು ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಠಾಣೆಗೆ ಕರೆದಿದ್ದೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚನ್ನಮ್ಮನ ಕಿತ್ತೂರು: ಟೆಂಪೊ ಪಲ್ಟಿ, ಮೂವರು ಸ್ಥಳದಲ್ಲೇ ಸಾವು, ಆರು ಮಂದಿಗೆ ಗಾಯ

Spread the loveಚನ್ನಮ್ಮನ ಕಿತ್ತೂರು: ಇಲ್ಲಿನ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ, ಸಿಮೆಂಟ್‌ ಕಂಬಗಳನ್ನು ಸಾಗಣೆ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ