Breaking News

ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

Spread the love

ನವದೆಹಲಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನು ಉಂಟು ಮಾಡುತ್ತವೆ. ನಾವು ಜಾಗರೂಕರಾಗಿಬೇಕು ಎಂದು ಪ್ರಧಾನಿ ಮೋದಿ ಅವರು ಎಚ್ಚರಿಸಿದರು.

ಕೋವಿಡ್ ನಾಲ್ಕನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ರಾಜ್ಯಗಳಲ್ಲಿ ಲಸಿಕೆ ಅಭಿಯಾನ ಚುರುಕು ಮಾಡಿ. ಬೂಸ್ಟರ್ ಡೋಸ್ ಬಗ್ಗೆ ರಾಜ್ಯಗಳು ಗಮನ ಕೊಡಬೇಕು. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಕೊಡಲು ಶೀಘ್ರವಾಗಿ ಕ್ರಮವಹಿಸಬೇಕು. ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಬೇಕು. ಸೋಂಕಿತ ರಾಷ್ಟ್ರಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು ಎಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಎಲ್ಲಾ ರಾಜ್ಯದ ಸಿಎಂಗಳಿಗೆ ಸೂಚನೆ.

ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ರಾಜ್ಯಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಿ. ಸೋಂಕು ಕಡಿಮೆ ಇದೆ ಅಂತ ಟೆಸ್ಟಿಂಗ್ ಕಡಿಮೆ ಮಾಡಬೇಡಿ. ಟೆಸ್ಟಿಂಗ್ ಪ್ರಮಾಣ ಹೆಚ್ಚಳ ಮಾಡಿ ಸೋಂಕಿತರನ್ನ ಬೇಗ ಟ್ರೇಸ್ ಮಾಡಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ