Breaking News

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ -ಬಿತ್ತು ಮೊದಲ ವಿಕೆಟ್

Spread the love

ಬೆಂಗಳೂರು: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ (PSI Recruitment Scam) ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಮೊದಲ ತಲೆದಂಡ ಆಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್‌ ಎತ್ತಂಗಡಿಯಾಗಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ 1995 ಬ್ಯಾಚ್​ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ ಅವರನ್ನು (IPS officer Amrit Paul) ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ಆಂತರಿಕ ಭದ್ರತಾ ದಳದ ಎಡಿಜಿಪಿ ಆಗಿ ಪೌಲ್‌ ವರ್ಗಾವಣೆಯಾಗಿದ್ದಾರೆ. ನೇಮಕಾತಿ ವಿಭಾಗದ ನೂತನ ಎಡಿಜಿಪಿ ಆಗಿ ಹಿತೇಂದ್ರ ನೇಮಕಗೊಂಡಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಆರ್. ಹಿತೇಂದ್ರಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಪ್ರಸ್ತುತ ಅವರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಮೃತ್ ಪೌಲ್‌ ಅಕ್ರಮದಲ್ಲಿ ಭಾಗಿ- ಕಾಂಗ್ರೆಸ್‌ನಿಂದ ಆರೋಪ:
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್‌ ಅವರು ಅಕ್ರಮದಲ್ಲಿ ಭಾಗಿಯಾದ ಬಗ್ಗೆ ಕಾಂಗ್ರೆಸ್‌ನಿಂದ ಆರೋಪ ಕೇಳಿಬಂದಿತ್ತು. ಅಮೃತ್ ಪೌಲ್‌ ವಿರುದ್ಧ ಕಾಂಗ್ರೆಸ್‌ ಆರೋಪದ ಹಿನ್ನೆಲೆ ಈ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ