Breaking News

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ -ಬಿತ್ತು ಮೊದಲ ವಿಕೆಟ್

Spread the love

ಬೆಂಗಳೂರು: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ (PSI Recruitment Scam) ಅಕ್ರಮಗಳು ನಡೆದಿರುವ ಹಿನ್ನೆಲೆಯಲ್ಲಿ ಮೊದಲ ತಲೆದಂಡ ಆಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್‌ ಎತ್ತಂಗಡಿಯಾಗಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ 1995 ಬ್ಯಾಚ್​ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ ಅವರನ್ನು (IPS officer Amrit Paul) ವರ್ಗಾವಣೆಗೊಳಿಸಿ ಸರ್ಕಾರ ಆದೇಶ ನೀಡಿದೆ. ಆಂತರಿಕ ಭದ್ರತಾ ದಳದ ಎಡಿಜಿಪಿ ಆಗಿ ಪೌಲ್‌ ವರ್ಗಾವಣೆಯಾಗಿದ್ದಾರೆ. ನೇಮಕಾತಿ ವಿಭಾಗದ ನೂತನ ಎಡಿಜಿಪಿ ಆಗಿ ಹಿತೇಂದ್ರ ನೇಮಕಗೊಂಡಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಆರ್. ಹಿತೇಂದ್ರಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಪ್ರಸ್ತುತ ಅವರು ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಮೃತ್ ಪೌಲ್‌ ಅಕ್ರಮದಲ್ಲಿ ಭಾಗಿ- ಕಾಂಗ್ರೆಸ್‌ನಿಂದ ಆರೋಪ:
ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್‌ ಅವರು ಅಕ್ರಮದಲ್ಲಿ ಭಾಗಿಯಾದ ಬಗ್ಗೆ ಕಾಂಗ್ರೆಸ್‌ನಿಂದ ಆರೋಪ ಕೇಳಿಬಂದಿತ್ತು. ಅಮೃತ್ ಪೌಲ್‌ ವಿರುದ್ಧ ಕಾಂಗ್ರೆಸ್‌ ಆರೋಪದ ಹಿನ್ನೆಲೆ ಈ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ