Breaking News

ಸ್ಯಾಂಡಲ್​ವುಡ್​ಗೆ ದೊಡ್ಮನೆಯ ಮತ್ತೊಂದು ಕುಡಿ ಎಂಟ್ರಿ:

Spread the love

ಬೆಂಗಳೂರು: ವರನಟ ಡಾ. ರಾಜ್​ಕುಮಾರ್​ ಕುಟುಂಬದ ಅಭಿಮಾನಿಗಳಿಗೆ ಈ ದಿನ ಮರೆಯಲಾಗದ ಸುದಿನವಾಗಿದೆ. ಸ್ಯಾಂಡಲ್​​ವುಡ್​ಗೆ ಅಣ್ಣಾವ್ರ ಕುಟುಂಬದ ಮತ್ತೊಂದು ಕುಡಿ ಎಂಟ್ರಿಯಾಗಿದೆ.

ಸ್ಯಾಂಡಲ್​ವುಡ್ ‘ಯುವರಾಜ್’ನಿಗೆ ಇಂದು ಪಟ್ಟಾಭಿಷೇಕವಾಗಿದೆ.

ಯಂಗ್ ಪವರ್​ ಸ್ಟಾರ್​ ಅವರನ್ನು ಹೊಂಬಾಳೆ ಸಿನಿಮಾ ಸಂಸ್ಥೆ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದು, ಹೊಸ ಸಿನಿಮಾ ಘೋಷಣೆಯಾಗಿದೆ. ಪುನೀತ್​ ರಾಜ್​ಕುಮಾರ್​ ಅವರ ನೆಚ್ಚಿನ ನಿರ್ದೇಶಕ ಸಂತೋಷ್​ ಆನಂದ​ರಾಮ್ ಯುವ ರಾಜ್​ಕುಮಾರ್​​ಗೆ ನಿರ್ದೇಶನ ಮಾಡಲಿದ್ದಾರೆ.

ಅಪ್ಪು ಸಿನಿಮಾ ಅನೌನ್ಸ್ ಮಾಡುವ ಮೂಲಕವೇ ಚಿತ್ರ ನಿರ್ಮಾಣಕ್ಕೆ ಹೊಂಬಾಳೆ ಸಿನಿಮಾ ಸಂಸ್ಥೆ ಚಿತ್ರರಂಗಕ್ಕೆ ಕಾಲಿಟ್ಟಿತು. ಅಭಿಮಾನಿಗಳ ಮನದಲ್ಲಿ ಅಪ್ಪು ಉತ್ತರಾಧಿಕಾರಿ ಆಗಿರುವ ಯುವರಾಜ್​ ಅವರನ್ನು ಹೊಂಬಾಳೆ ಫಿಲ್ಮ್ಸ್​ ಚಿತ್ರರಂಗಕ್ಕೆ ಪರಿಚಯಿಸುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಹೊಂಬಾಳೆ ಸಿನಿಮಾ ಸಂಸ್ಥೆ, ಡಾ. ರಾಜ್​ಕುಮಾರ್​ ಕುಟುಂಬ ಹಾಗೂ ಹೊಂಬಾಳೆ ಸಂಸ್ಥೆ ನಡುವೆ ಇರುವ ಸಂಬಂಧದ ಮುಂದುವರಿದ ಭಾಗವಾಗಿ ನಾವು ನಮ್ಮ ಹೊಂಬಾಳೆ ಫಿಲಂಸ್​ನಲ್ಲಿ ದೊಡ್ಮನೆಯ ಮೂರನೇ ತಲೆಮಾರಿನ ಯುವರಾಜ್​ ಕುಮಾರ್​ರನ್ನು ನಾಯಕನಟನಾಗಿ ಬೆಳ್ಳಿಪರದೆಗೆ ಪರಿಚಯಿಸಲು ಹಮ್ಮೆ ಪಡುತ್ತೇವೆ. ಈ ಪ್ರಯತ್ನದಲ್ಲಿ ನಮ್ಮ ಸಂಸ್ಥೆಯಲ್ಲಿ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಸಂತೋಷ್​ ಆನಂದ್​ ರಾಮ್​ ಅವರ ಸಾರಥ್ಯದಲ್ಲಿ ಈ ಚಿತ್ರವನ್ನು ನಿರ್ಮಿಸಲಿದ್ದೇವೆ. ನಮ್ಮ ಸಂಸ್ಥೆಯ ಚಿತ್ರಗಳಿಗೆ ನೀವು ನೀಡಿರುವ ಬೆಂಬಲವನ್ನು ಈ ಚಿತ್ರಕ್ಕೂ ನೀಡಿ ಈ ಸಂಕಲ್ಪವನ್ನು ಯಶಸ್ವಿಯಾಗಿಸಬೇಕೆಂದು ಹೊಂಬಾಳೆ ಫಿಲ್ಮ್ಸ್​ ಕೋರಿದೆ.


Spread the love

About Laxminews 24x7

Check Also

ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ.

Spread the love ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ. ಶಿಕ್ಷಣ ನೀಡಬೇಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ