Breaking News

ಕೋವಿಡ್ 4ನೇ ಅಲೆ ಆತಂಕದ ಮಧ್ಯೆ ಮತ್ತೊಂದು ಶಾಕ್, ಬೆಂಗಳೂರಿನಲ್ಲಿ ಸಿಗುತ್ತಿಲ್ಲ ಬೂಸ್ಟರ್ ಡೋಸ್!

Spread the love

ಬೆಂಗಳೂರು: ಕೊಂಚ ತಣ್ಣಗಾಗಿದೆ ಎಂದುಕೊಂಡಿದ್ದ ಕೊರೋನಾ (Corona) ಮಹಾಮಾರಿ ಮತ್ತೆ ಅಬ್ಬರಿಸುತ್ತಿದೆ. ಕೋವಿಡ್ 4ನೇ ಅಲೆ (Covid 4th Wave) ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ.

ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ (Government) ಮುಂದಾಗಿದೆ ಅಂತ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ (Health Minister Dr. K.Sudhakar) ಹೇಳಿದ್ದಾರೆ. ಬೆಂಗಳೂರಿನ (Bengaluru) ಬಗ್ಗೆ ಹೆಚ್ಚಿನ ಜಾಗೃತೆ ತೆಗೆದುಕೊಳ್ಳಲು ತಜ್ಞರು ಸೂಚಿಸಿದ್ದಾರೆ. ಆದರೆ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಕೊರೋನಾ ಬೂಸ್ಟರ್ ಡೋಸ್ (Corona Booster Dose) ಅಭಾವ ಎದುರಾಗಿದೆ.

ಕೊರೋನಾ 4ನೇ ಅಲೆಯ ಟೆನ್ಶನ್

ಜೂನ್ ಹೊತ್ತಲ್ಲಿ ಮತ್ತೊಂದು ಸುತ್ತಿನ ಕೊರೋನಾ ಹಲ್‌ಚಲ್ ನಡೆಯುವ ಸಂಭವವಿದೆ. ತಜ್ಞರು ಇದನ್ನು ಖಚಿತಪಡಿಸಿದ್ದು, ಸರ್ಕಾರ ಕೂಡ ಈ ಬಗ್ಗೆ ಚಿಂತನೆಗೆ ಬಿದ್ದಿದೆ. ಹೀಗಾಗಿ ಜನ ಸಾಮಾನ್ಯರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಈಗಾಗಲೇ ಮೊದಲ ಡೋಸ್ ಹಾಗೂ ಎರಡನೇ ಡೋಸ್ ಲಸಿಕೆಯೇ ಪೂರ್ಣ ಪ್ರಮಾಣದಲ್ಲಿ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಸಹಜವಾಗಿಯೇ ಭೀತಿ ಇಮ್ಮಡಿಯಾಗಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ