Breaking News

ಬೆಂಕಿ ಅವಘಡ: ಹೊಸ ಎಲೆಕ್ಟ್ರಿಕ್‌ ವಾಹನ ಬಿಡುಗಡೆ ಮುಂದೂಡಲು ಕೇಂದ್ರದ ಸೂಚನೆ

Spread the love

ನವದೆಹಲಿ: ಇತ್ತೀಚಿನ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್‌ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

‘ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಹೊಸ ವಾಹನಗಳ ಬಿಡುಗಡೆ ಮುಂದೂಡುವಂತೆ ಮನವಿ ಮಾಡಲಾಗಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಇದರಲ್ಲಿ ವಾಹನ ತಯಾರಕರ ಅಥವಾ ಗ್ರಾಹಕರ ಪ್ರಮಾದ ಇದೆಯೇ’ ಎಂಬ ಕುರಿತು ಸರ್ಕಾರ ಸ್ಪಷ್ಟನೆ ಬಯಸಿದೆ. ತನಿಖಾ ವರದಿಯನ್ನು ಆಧರಿಸಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ಕುರಿತು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಸಚಿವಾಲಯದ ಮನವಿಗೆ ಎಲೆಕ್ಟ್ರಿಕ್ ವಾಹನ ಉತ್ಪಾದಕ ಕಂಪನಿಗಳು ಧನಾತ್ಮಕವಾಗಿ ಸ್ಪಂದಿಸಿದ್ದು, ಸಂಪೂರ್ಣ ಸಹಕಾರದ ಭರವಸೆ ನೀಡಿವೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ