Breaking News

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಭರ್ಜರಿ ಗುಡ್ ನ್ಯೂಸ್: ನಿಮಗೆ ಕಂದಾಯ ಇಲಾಖೆಯಿಂದ ಗುತ್ತಿಗೆ ನೀಡಲು ನಿರ್ಧಾರ

Spread the love

ಬೆಂಗಳೂರು: ರಾಜ್ಯದ ಅನೇಕ ಕಡೆಯಲ್ಲಿ ಸರ್ಕಾರಿ ಭೂಮಿಯನ್ನು ( Government Land ) ಕಬಳಿಕೆ ಮಾಡಿದಂತ ಆರೋಪ, ಪ್ರಕರಣ ಕೇಳಿ ಬಂದಿದೆ. ಇದೀಗ ಹೀಗೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವಂತ ರೈತರಿಗೇ, ಕಂದಾಯ ಇಲಾಖೆಯಿಂದ ( Revenue Department ) ಆ ಭೂಮಿಯನ್ನು ಗುತ್ತಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗುತ್ತಿದೆ.

ಈ ಮೂಲಕ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಗುಡ್ ನ್ಯೂಸ್ ನೀಡಲಿದೆ.

 

ಈ ಬಗ್ಗೆ ಮಾಹಿತಿ ನೀಡಿದಂತ ಕಂದಾಯ ಸಚಿವ ಆರ್ ಅಶೋಕ್ ( Minister R Ashok ), ಭೂ ಕಬಳಿಕ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಬೆಳೆಗಾರರು ಒತ್ತುವರಿ ಮಾಡಿರುವ ಕಂದಾಯ ಭೂಮಿಯನ್ನು ಅವರಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಕ್ರಮ ಕೈಗೊಳ್ಳಲಾಗುವುದು ದರು.

5, 10, 15, 25 ಎಕರೆ ಒತ್ತುವರಿ ಮಾಡಿರುವವರಿಗೆ ಪ್ರತ್ಯೇಕ ದರ ನಿಗದಿ ಪಡಿಸಿ, ಯಾವ ರೀತಿ ಅನುಕೂಲ ಮಾಡಿಕೊಡಬಹುದು ಎನ್ನುವುದು ಕಾಯ್ದೆಯಲ್ಲಿ ಸೇರಿಸಲಾಗುವುದು. ಕೆಲವರು ನೀಡಿದ ಅರ್ಜಿಯಲ್ಲಿ 10 ವರ್ಷದಿಂದ 30 ವರ್ಷವರೆಗೆ ಗುತ್ತಿಗೆ ನೀಡುವಂತೆ ಕೇಳಿದ್ದಾರೆ. ಆ ಬಗ್ಗೆ ಕಾನೂನು ಪ್ರಕಾರ ಆದೇಶ ಮಾಡಲಾಗುತ್ತದೆ ಎಂದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ