Breaking News

ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಹೈಡ್ರಾಮಾ ಮಾಡಿದ ಆರೋಪಿಗಳು

Spread the love

ಬೆಂಗಳೂರು: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿಲುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ.

 

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಜೈಲಿನಲ್ಲಿ ಇರಿಸಲಾಗಿದ್ದು, ಈ ಪೈಕಿ ಐವರು ಆರೋಪಿಗಳನ್ನು ಎನ್‌ಐಎ ಪೊಲೀಸರ ವಶಕ್ಕೆ ನೀಡಿ ನಗರದ ಎನ್‌ಐಎ ವಿಶೇಷ ನ್ಯಾಯಾಲಯ ಮಂಗಳವಾರ (ಏ.26) ಆದೇಶಿಸಿತ್ತು.

ಇದರನ್ವಯ ಎನ್‌ಐಎ ಅಧಿಕಾರಿಗಳು, ಆರೋಪಿಗಳನ್ನು ವಶಕ್ಕೆ ಪಡೆಯಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾಗ ಆರೋಪಿಗಳು ಸುತಾರಾಂ ನಿರಾಕರಿಸಿದ್ದಾಗಿ ಮೂಲಗಳು ತಿಳಿಸಿವೆ. ರಂಜಾನ್ ಮುಗಿಯುವವರೆಗೆ ಎನ್‌ಐಎ ವಶಕ್ಕೆ ನೀಡಬಾರದು ಎಂದು ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದು, ವೈದ್ಯಕೀಯ ತಪಾಸಣೆಯ ನಂತರ ಐವರು ಆರೋಪಿಗಳನ್ನು ಎನ್‌ಐಎ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಇನ್ನು ಕೆಲವೇ ದಿನಗಳಲ್ಲಿ ಇನ್ನೂ ಐವರು ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದುಕೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ