Breaking News

ಕಮಲಿ ಧಾರಾವಾಹಿಯ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ

Spread the love

ಬೆಂಗಳೂರು: ಧಾರಾವಾಹಿ ನಿರ್ಮಾಪಕನಿಂದ ಹಣಪಡೆದ ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್​ ಕೌಶಿಕ್​ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ನಿರ್ಮಾಪಕ ರೋಹಿತ್ಅರವಿಂದ್​ ಕೌಶಿಕ್​ ಅವರು ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದಾರೆ.

ನಮ್ ಏರಿಯಾದಲ್ಲಿ ಒಂದಿನ,‌ ಹುಲಿರಾಯ ಹಾಗೂ ಶಾರ್ದೂಲ ಹೆಸರಿನಿ ಸಿನಿಮಾಗಳನ್ನು ಕೌಶಿಕ್​ ನಿರ್ದೇಶನ ಮಾಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ.

ಆರೋಪ ಏನೆಂದರೆ, ಕಮಲಿ ಧಾರವಾಹಿ ನಿರ್ಮಾಣ ಮಾಡಲಿಕ್ಕೆ ನಿರ್ಮಾಪಕ ರೋಹಿತ್​ 73 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರಂತೆ. 2018 ರಲ್ಲಿ ಕಮಲಿ ಸೀರಿಯಲ್ ನಿರ್ಮಾಣಕ್ಕೆ ರೋಹಿತ್​ ಹಣ ಹೂಡಿಕೆ ಮಾಡಿದ್ದರಂತೆ. ಆದರೆ. ಧಾರವಾಹಿ ತೆರೆಕಂಡ ನಂತರ ಹಣ ಹಿಂತಿರುಗಿಸದೇ, ಲಾಭಾಂಶವನ್ನೂ ನೀಡದೇ ವಂಚನೆ ಮಾಡಿದ್ದಾರೆ ಎಂದು ಕೌಶಿಕ್​ ವಿರುದ್ಧ ರೋಹಿತ್​ ಆರೋಪ ಮಾಡಿದ್ದಾರೆ.

ಈ ಸಂಬಂಧ ನಿರ್ಮಾಪಕ ರೋಹಿತ್ ವೈಯ್ಯಾಲಿಕಾವಲ್ ಠಾಣೆಗೆ ದೂರು ನೀಡಿದ್ದಾರೆ. ಅರವಿಂದ್ ಕೌಶಿಕ್ ವಿರುದ್ಧ 420 ಸೆಕ್ಷನ್​ ಅಡಿ ಪ್ರಕರಣ ದಾಖಲಾಗಿದ್ದು, ಸದ್ಯ ವೈಯ್ಯಾಲಿಕಾವಲ್ ಪೊಲೀಸರು ಅರವಿಂದ್ ಕೌಶಿಕ್​ರನ್ನು ಬಂಧಿಸಿದ್ದಾರೆ


Spread the love

About Laxminews 24x7

Check Also

2028ಕ್ಕೆ ಕಾಂಗ್ರೆಸ್​ ಕ್ರಾಂತಿ ಎಬ್ಬಿಸುತ್ತೆ: ಸಚಿವ ಚಲುವರಾಯಸ್ವಾಮಿ

Spread the loveಮಂಡ್ಯ : ನವೆಂಬರ್ ಕ್ರಾಂತಿನೂ ಇಲ್ಲ, ಸಂಕ್ರಾಂತಿ ಕ್ರಾಂತಿನೂ ಇಲ್ಲ, ಯುಗಾದಿಗೂ ಇಲ್ಲ. 2028ಕ್ಕೆ ಮತ್ತೆ ನಾವೇ, ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ