ವಿಜಯಪುರ, ಏಪ್ರಿಲ್ 29 ; ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ನಡೆಯುತ್ತಿದೆ. ಈ ವೇಳೆ ಶಿಕ್ಷಕರಿಗೆ ಉತ್ತರ ಪತ್ರಿಕೆಯೊಂದು ಸಿಕ್ಕಿದ್ದು, ವಿದ್ಯಾರ್ಥಿ ಸಾಷ್ಟಾಂಗ ನಮಸ್ಕಾರ ಹಾಕಿದ್ದಾನೆ.
ವಿಜಯಪುರದ ಸ್ನೇಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೌಲ್ಯ ಮಾಪನದ ವೇಳೆ ಈ ಪತ್ರಿಕೆ ಪತ್ತೆಯಾಗಿದೆ.
ಬಿಲ್ ಕಲೆಕ್ಟರ್ ಆಗಿ ಮುಂಬಡ್ತಿ ಪಡೆಯಲು ಒಂದು ಅಂಕ ನೀಡಿ ಎಂದು ಮನವಿ ಮಾಡಿರುವ ಈ ಪತ್ರಿಕೆ ಫೋಟೋ ವೈರಲ್ ಆಗಿದೆ.
ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿರುವ ವಿದ್ಯಾರ್ಥಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾನೆ. ಪರೀಕ್ಷೆಯಲ್ಲಿ ಪಾಸ್ ಆದರೆ ಬಿಲ್ ಕಲೆಕ್ಟರ್ ಆಗಿ ಬಡ್ತಿ ದೊರೆಯಲಿದೆ. ಅದಕ್ಕಾಗಿ ಶಿಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ವಿದ್ಯಾರ್ಥಿ ಮನವಿ ಮಾಡಿದ್ದಾನೆ.