Breaking News

ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗಷ್ಟೇ ಅಡ್ಮಿಷನ್

Spread the love

ಬೆಂಗಳೂರು : ನಗರದ ರಿಚರ್ಡ್ ಕ್ಲಾರೆನ್ಸ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಬೇರೆ ಧರ್ಮದ ಮಕ್ಕಳಿಗೆ ಪ್ರವೇಶ ಇಲ್ಲವೆಂದು ಆಡಳಿತ ಮಂಡಳಿ ಆದೇಶವನ್ನು ಹೊರಡಿಸಿದೆ.

ಇತ್ತೀಚೆಗಷ್ಟೇ ಶಾಲೆಯಲ್ಲಿ ಬೈಬಲ್ ಕಲಿಯುವುದನ್ನು ಕಡ್ಡಾಯಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ ಕ್ಲಾರೆನ್ಸ್ ಶಾಲೆಗೆ ನೋಟಿಸ್ ನೀಡಲಾಗಿತ್ತು. ಇದೀಗ ಬೈಬಲ್ ವಾರ್ ಮುಂದುವರಿದಿದ್ದು, ಮುಂದಿನ ವರ್ಷದಿಂದ ಕ್ರಿಶ್ಚಿಯನ್ ಮಕ್ಕಳಿಗೆ ಮಾತ್ರ ಪ್ರವೇಶ ನೀಡಿ, ಹಿಂದೂ ಮಕ್ಕಳಿಗೆ ಪ್ರವೇಶ ಮಾಡಿಕೊಳ್ಳದಂತೆ ಶಾಲಾ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಈ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿ, ಬೈಬಲ್ ಬಗ್ಗೆ ಕ್ರಿಶ್ಚಿಯನ್ ಮಕ್ಕಳಿಗಷ್ಟೆ ನೈತಿಕ ಬೋಧನೆ ಮಾಡಲಾಗ್ತಿತ್ತು. ನಮ್ಮ ಶಾಲೆಯಲ್ಲಿ ಬೈಬಲ್ ನೈತಿಕ ಬೋಧನೆ ಮಾಡುತ್ತಿದ್ದೆವು. ಧರ್ಮ ಬೋಧನೆ ಮಾಡುತ್ತಿರಲಿಲ್ಲ ಎಂದು ತಿಳಿಸಿದೆ.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ