Breaking News

ಇಂದಿನಿಂದ ಜೂ.15ರ ವರೆಗೆ ಸರಕಾರಿ ನೌಕರರ ವರ್ಗಾವಣೆ

Spread the love

ಬೆಂಗಳೂರು: 2022-23ನೇ ಸಾಲಿನಲ್ಲಿ ಮಾಡಲಾಗುವ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹೊರಡಿಸಿರುವ ಸರಕಾರ, ಆಯಾ ಇಲಾಖಾ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಿದೆ.

ಮಾರ್ಗಸೂಚಿ ಪ್ರಕಾರ, ಪ್ರತಿ ವರ್ಷ ಮೇ ಮತ್ತು ಜೂನ್‌ ತಿಂಗಳಲ್ಲಿ ಮಾತ್ರ ವರ್ಗಾವಣೆಗಳನ್ನು ಮಾಡಬಹುದು.

 

ಈ ಹಿನ್ನೆಲೆಯಲ್ಲಿ 2022-23ನೇ ಸಾಲಿಗೆ ಎ, ಬಿ, ಸಿ ಮತ್ತು ಡಿ ಗ್ರೂಪ್‌ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 2022ರ ಮೇ 1ರಿಂದ ಜೂ.15ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿದೆ.

ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಶನಿವಾರ ಈ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ