Breaking News

PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!

Spread the love

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಆರೋಪಿ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಒಡತಿ.

ಇದೇ ಶಾಲೆಯಲ್ಲಿ ಅಕ್ರಮ ನಡೆದಿರುವ ಆರೋಪವಿದೆ. ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ.

ಎರಡು ಟೀಮ್​​ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಬಾಯಿಬಿಟ್ಟಿದ್ದಾರೆ. ಆ ಎರಡು ಟೀಮ್​ ಯಾವುದೆಂದರೆ, ಆರ್.ಡಿ. ಪಾಟೀಲ್ ಆಂಡ್ ಮಂಜುನಾಥ್ ಗ್ಯಾಂಗ್. ಈ ಎರಡು ಗ್ಯಾಂಗ್​ನಿಂದಲೂ ದಿವ್ಯಾ ಅವರಿಗೆ ದೊಡ್ಡ ಮಟ್ಟದ ಹಣ ಸಂದಾಯವಾಗಿದೆಯಂತೆ.

ಆರ್ ಡಿ ಪಾಟೀಲ್ ಆಂಡ್ ಮಂಜುನಾಥ್ ಬಳಿಯಿಂದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ‌ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ಹಣ ಕೊಡಿಸಿದ್ದ. ದಿವ್ಯಾ ಹಾಗರಗಿ , ಆರ್.ಡಿ.ಪಾಟೀಲ್ ಹಾಗೂ ಮಂಜುನಾಥ್ ಮಧ್ಯೆ ಕಾಶೀನಾಥ್​ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ. ಈ ಕಾಶಿನಾಥ್ ಕೂಡ ಅಕ್ರಮದಲ್ಲಿ‌ ದೊಡ್ಡ ಮೊತ್ತದ ಹಣ ಪಡೆದಿರುವುದು‌ ಬೆಳಕಿಗೆ ಬಂದಿದೆ.

ಸದ್ಯ ಪ್ರಕರಣ ಬಯಲಾಗ್ತಿದ್ದ ಹಾಗೆ ಕಾಶೀನಾಥ್​ ತೆಲೆ‌ಮರೆಸಿಕೊಂಡಡಿದ್ದಾನೆ. ಈ ಪ್ರಕರಣದ ಬಗ್ಗೆ ದಿವ್ಯಾ ಹಾಗರಗಿಯಿಂದ ಸಿಐಡಿ ಅಧಿಕಾರಿಗಳು ಇಂಚಿಂಚು ಮಾಹಿತಿಯನ್ನು ಪಡೆಯುತ್ತಿದ್ದಾರೆ. ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ದಿವ್ಯಾ, ಒಂದೊಂದಾಗಿ ಮಾಹಿತಿ ನೀಡುತ್ತಿದ್ದಾರೆ. ಕಾಶೀನಾಥ್​ ಮಾತು ಕೇಳಿ ಅಕ್ರಮ ಎಸಗಿರುವುದಾಗಿ ದಿವ್ಯಾ ಬಾಯಿ ಬಿಟ್ಟಿದ್ದಾರೆ.

ಇನ್ನೂ ಕಾಶೀನಾಥ್​ ಮುಖಾಂತರ ಅಕ್ರಮ ಎಸಗಲು ಇಂಜಿನಿಯರ್​ ಮಂಜುನಾಥ್​ ಪ್ಲಾನ್ ಮಾಡಿದ್ದ. ಪರೀಕ್ಷೆಯಲ್ಲಿ ಓಎಂಆರ್ ಶೀಟ್ ತಿದ್ದುವ ಬಗ್ಗೆ ಕಾಶೀನಾಥ್​ ಹಾಗೂ ಮಂಜುನಾಥ್ ನಡುವೆ ಮಾತುಕತೆ ನಡೆದಿತ್ತು. ಇದಕ್ಕಾಗಿ ಕಾಶೀನಾಥ್ ದಿವ್ಯಾ ಜತೆ ಮಾತನಾಡಿ ಹಣಕಾಸಿನ ವ್ಯವಹಾರದ ಬಗ್ಗೆ ಚರ್ಚಿಸಿದ್ದರು. ದಿವ್ಯಾ ಹಾಗರಗಿ ಒಡೆತನದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆ ಬರೆಯುವ ತನ್ನ ಅಭ್ಯರ್ಥಿಗಳಿಗೆ ಸಹಾಯ ಮಾಡುವಂತೆ ಕಾಶೀನಾಥ್ ಬಳಿ ಮಂಜುನಾಥ್​ ಕೇಳಿಕೊಂಡಿದ್ದ.

ಕಾಶೀನಾಥ್​ ಮುಖಾಂತರ ದಿವ್ಯಾರನ್ನು ಮಂಜುನಾಥ್​ ಸಂಪರ್ಕ ಮಾಡಿದ್ದ. 


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ