Breaking News

ಅರವಿಂದ್ ಬೆಲ್ಲದ್‌ ರಾಜ್ಯಾಧ್ಯಕ್ಷರಾದ್ರೆ; ಬೊಮ್ಮಾಯಿ ಸಿಎಂ ಸ್ಥಾನಕ್ಕೆ ತೊಂದ್ರೆ!

Spread the love

ಬೆಂಗಳೂರು, ಮೇ. 01: ಈ ಹಿಂದೆ ಸಿಎಂ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಬಿಜೆಪಿ ಹಿರಿಯ ನಾಯಕ ಅರವಿಂದ್ ಬೆಲ್ಲದ್ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಒಟ್ಟ ಒಲಿಯುವ ಸಾಧ್ಯತೆ. ಬೆಲ್ಲದ್ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಸಿಎಂ ಹುದ್ದೆಯಿಂದ ಬೊಮ್ಮಾಯಿ ಅವರನ್ನು ಇಳಿಸಿ ಒಕ್ಕಲಿಗ ಸಮುದಾಯದ ನಾಯಕರೊಬ್ಬರನ್ನು ಸಿಎಂ ಖುರ್ಚಿಯಲ್ಲಿ ಕೂರಿಸಲಾಗುತ್ತದೆ!

ಇದು ರಾಜಕೀಯ ಪಡಸಾಲೆಯಲ್ಲಿ ಬಲವಾಗಿ ಕೇಳಿ ಬರುತ್ತಿರುವ ಸುದ್ದಿ.

ಬಿಜೆಪಿ ಪಕ್ಷದಲ್ಲಿ ಎರಡು ದಿನದಿಂದ ಬಹು ಚರ್ಚಿತ ಸಂಗತಿಗಳಿವು. ರಾಜ್ಯದಲ್ಲಿ ಸಂಪುಟ ಬದಲಾವಣೆ ಅಲ್ಲ, ಸಿಎಂ ಬದಲಾವಣೆ ಆಗುವ ಸಾಧ್ಯತೆಗಳಿವೆ ಎಂದೇ ಹೇಳಲಾಗುತ್ತಿದೆ. ಅಧಿಕಾರ ಮತ್ತು ಪಕ್ಷದ ವಿಚಾರ ಬಂದರೆ ಬಿಜೆಪಿ ವರಿಷ್ಠರು ಅನಿರಿಕ್ಷಿತ ಅಚ್ಚರಿ ನಿರ್ಣಯ ಕೈಗೊಂಡಿರುವ ಸಾಕಷ್ಟು ಉದಾರಣೆಗಳಿವೆ. ಯಡಿಯೂರಪ್ಪ ಅವರನ್ನು ಸಿಎಂ ಖುರ್ಚಿಯಿಂದ ಕೆಳಗಿಸಿ ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ಹೈಕಮಾಂಡ್ ಅಚ್ಚರಿ ನಿರ್ಣಯವೇ. ಅಂತಹ ಮತ್ತೊಂದು ನಿರ್ಣಯ ಶೀಘ್ರದಲ್ಲಿ ಹೊರ ಬಳಲಿದೆ. ಹೈಕಮಾಂಡ್ ಈ ನಿರ್ಣಯದಿಂದ ಬಿಜೆಪಿ ಪಕ್ಷದಲ್ಲಿ ಬದಲಾವಣೆಯಾಗಲಿವೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ