Breaking News

ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಅರ್ಜಿ ಸಲ್ಲಿಸಿದ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!

Spread the love

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ( Minister R Ashok ), ಬೆಂಗಳೂರಿನ ನಾಗರೀಕರಿಗೆ ವಿವಿಧ ಪಿಂಚಣಿ ಸೌಲಭ್ಯ ತಲುಪಿಸಲು‌ ಇ-ಕಾಮರ್ಸ್ ಮೊರೆ ಹೋಗೋದಕ್ಕೆ ಚಿಂತನೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಸ್ವಿಗ್ಗಿ, ಡಂಜೋ, ಜೊಮ್ಯಾಟೋ ಸಿಬ್ಬಂದಿ ಮೂಲಕ ಪಿಂಚಣಿ ಸೌಲಭ್ಯ ಮುಟ್ಟಿಸಲು ಪ್ಲಾನ್ ಮಾಡಲಾಗಿದೆ ಎಂದರು.ಮಧ್ಯವರ್ತಿಗಳ ಕಾಟವಿಲ್ಲದೆ, ಫಲಾನುಭವಿಗಳಿಗೆ ಅಲೆದಾಟ ಇಲ್ಲದೆ ಪಿಂಚಣಿ ಮಂಜೂರು ಮಾಡಲಾಗುವುದು. ಅರ್ಜಿ ಸಲ್ಲಿಸಿದ 72 ಗಂಟೆಗಳ ಒಳಗೆ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲಾಗುವುದು. ಇದು ದೇಶದಲ್ಲೇ ಮಾದರಿ ಪ್ರಕ್ರಿಯೆಯಾಗಿದೆ ಎಂದು ಹೇಳಿದರು


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ