Home / ಜಿಲ್ಲೆ / ಬೆಂಗಳೂರು / ಬೆನ್ನು ನೋವಿನ ನೆಪ ಹೇಳಿ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿ

ಬೆನ್ನು ನೋವಿನ ನೆಪ ಹೇಳಿ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿ

Spread the love

ಬೆಂಗಳೂರು: ಡ್ರಗ್ಸ್ ಮಾಫಿಯಾ ಜಾಲದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ನಾನು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ವಿಚಾರಣೆ ವೇಳೆ ಹಲವು ಸತ್ಯಸಂಗತಿಗಳು ಬೆಳಕಿಗೆ ಬರುತ್ತಿದೆ.

ಬೆಂಗಳೂರಿನ ಡೈರಿ ಸರ್ಕಲ್‍ನ ಕಿದ್ವಾಯಿ ಆಸ್ಪತ್ರೆ ಬಳಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನು ಶನಿವಾರ ಸಿಸಿಬಿ ವಿಚಾರಣೆ ಮಾಡಿಲ್ಲ. ನನಗೆ ಜ್ವರ, ಬೆನ್ನು ನೋವಿ ಎಂದು ನೆಪ ಹೇಳಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಗಿಣಿಯ ಮೆಡಿಕಲ್ ರಿಪೋರ್ಟ್ ಬರುವ ತನಕ ಯಾವುದೇ ವಿಚಾರಣೆ ನಡೆಯುವುದು ಅನುಮಾನವಾಗಿದೆ. ದೆಹಲಿಯಲ್ಲಿ ಡ್ರಗ್ ಪೆಡ್ಲರ್ ವೀರೇನ್ ಖನ್ನಾ ಬಂಧನದಿಂದ ಆತಂಕಕ್ಕೆ ಒಳಗಾಗಿರುವ ರಾಗಿಣಿ ತಮ್ಮ ವಿಚಾರಣೆಯನ್ನು ಮುಂದೂಡಲು ಹೈಡ್ರಾಮಾವೇ ಮಾಡುತ್ತಿದ್ದಾರೆ. ಹೀಗಾಗಿ ಜಡ್ಜ್ ಮುಂದೆಯೂ ವಿಡಿಯೋ ಕಾನ್ಫರೆನ್ಸ್‌ನಲ್ಲಿ ತಮಗೆ ಬೆನ್ನು ನೋವಿದೆ ಎಂದು ಪ್ರಸ್ತಾಪ ಮಾಡಿದ್ದಾರೆ.

ಜೊತೆಗೆ ಮನೆಗೆ ಹೋಗಿ ಬರಲು ಅವಕಾಶ ಕೇಳಿದ್ದಾರೆ. ಆದರೆ ಇದಕ್ಕೆಲ್ಲಾ ಅವಕಾಶ ಇಲ್ಲದ ಕಾರಣ ಸಾಂತ್ವನ ಕೇಂದ್ರದಲ್ಲಿ ರಾಗಿಣಿ ವಿಚಾರಣೆ ಎದುರಿಸದೇ ವಿಶ್ರಾಂತಿ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ಸಾಂತ್ವನ ಕೇಂದ್ರಕ್ಕೆ ತನಿಖಾಧಿಕಾರಿ ಅಂಜುಮಾಲ ನಾಯ್ಕ್ ಭೇಟಿ ನೀಡಿದ್ದರು. ಕೆಲವೊಂದು ದಾಖಲಾತಿಗಳೊಂದಿಗೆ ಆಗಮಿಸಿದ ಅಂಜುಮಾಲ ಅವರು ಸತತ ಮೂರು ಗಂಟೆಗಳ ಕಾಲ ಸಾಂತ್ವನ ಕೇಂದ್ರದಲ್ಲೇ ಇದ್ದು ತೆರಳಿದ್ದಾರೆ. ಬೆನ್ನು ನೋವಿನ ನೆಪ ಹೇಳಿ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿರನ್ನು ಭೇಟಿ ಆಗಿ ಕೆಲವೊಂದು ಮಾಹಿತಿಯನ್ನು ಪಡೆದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ