Breaking News
Home / ಜಿಲ್ಲೆ / ಮಂಡ್ಯ / 10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿ

10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿ

Spread the love

ಮಂಡ್ಯ :- 5 ಲಕ್ಷ ರೂಪಾಯಿ ಹಣಕೊಟ್ಟರೆ 10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ.

ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿಯ ಶ್ರೀ ಕಬ್ಬಾಳಮ್ಮ ಟೀ ಸ್ವಾಲ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು 12 ಗಂಟೆ ವೇಳೆಗೆ ಕುಣಿಗಲ್ ಮೂಲದ ಪುನೀತ್, ಕಿರಣ್ ಎಂಬ ಇಬ್ಬರು ವ್ಯಕ್ತಿಗಳು ( KA – 06 – Y – 8557 ) ಹೋಂಡಾ ಯೂನಿಕಾರ್ನ್ ಬೈಕ್ ನಲ್ಲಿ ಬಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದರು ಎನ್ನಲಾಗಿದೆ.

ಸ್ವಲ್ಪ ಸಮಯದ ನಂತರ ಅದೇ ಸ್ಥಳಕ್ಕೆ ಕೋಲಾರ ಮೂಲದ ಇಬ್ಬರು ವ್ಯಕ್ತಿಗಳು ( KA – 01 – 1772 ) ಟೊಯೋಟಾ ಇಟಿಯಾಸ್ ವೈಟ್ ಕಾರ್ ಕಾರಿನಲ್ಲಿ ಬಂದಿದ್ದಾರೆ. ನಂತರ ಹಣ ವಿನಿಮಯ ಮಾಡಿಕೊಳ್ಳಲು ನಾಲ್ವರು ಕಾರಿನಲ್ಲಿಯೇ ಕುಳಿತು ವ್ಯವಹಾರ ಕುದುರಿಸಲು ಶುರು ಮಾಡಿದ್ದಾರೆ. ಆದರೆ ಕಾರಿನಲ್ಲಿ ಕುಳಿತ ನಂತರ ಕುಣಿಗಲ್ ನಿಂದ ಬಂದಿದ್ದ ಪುನೀತ್, ಕಿರಣ್ ಇಬ್ಬರು ವ್ಯಕ್ತಿಗಳಿಂದ 5 ಲಕ್ಷ ರೂಪಾಯಿ ಅಸಲಿ ನೋಟುಗಳಿದ್ದ ಬ್ಯಾಗ್ ಅನ್ನು ಅರೋಪಿಗಳು ಪಡೆದುಕೊಂಡು.

ಆರೋಪಿಗಳು ತಂದಿದ್ದ ಬ್ಯಾಗ್ ನಲ್ಲಿ ಕೆಳಗೆ ನೋಟ್ ಬುಕ್ ಗಳನ್ನು ತುಂಬಿ ಮೇಲುಗಡೆ ಮಾತ್ರ 100, 200, 500 ರೂಪಾಯಿಯ ಅಸಲಿ ನೋಟುಗಳನ್ನು ಅಂಟಿಸಿ ಇದರಲ್ಲಿ 10 ಲಕ್ಷ ರೂಪಾಯಿ ಹಣವಿದೆ ಹೊರಗಡೆ ಹೋಗಿ ಎಣಿಸಿಕೊಳ್ಳಿ ಎಂದು ಕಾರಿನಿಂದ ಕೆಳಗಿಳಿಸಿ 5 ಲಕ್ಷ ರೂಪಾಯಿ ಅಸಲಿ ಹಣದೊಂದಿಗೆ ಆರೋಪಿಗಳು ಮಳವಳ್ಳಿ ಕಡೆಗೆ ಎಸ್ಕೇಪ್ ಆಗಿದ್ದಾರೆ. ಕಾರಿನಿಂದ ಕೆಳಗೆ ಇಳಿದು ಹಣ ಎಣಿಸಲು ಮುಂದಾದ ವೇಳೆ ಅಸಲಿ ಸತ್ಯ ಗೊತ್ತಾಗಿದೆ. ಹಣ ಕಳೆದುಕೊಂಡ ವ್ಯಕ್ತಿಗಳು ತಕ್ಷಣವೇ ಮಳವಳ್ಳಿ ಕಡೆಗೆ ಹೋಗುತ್ತಿದ್ದ ಬೇರೊಂದು ಕಾರನ್ನು ಅಡ್ಡಗಟ್ಟಿ ಇಟಿಯಾಸ್ ಕಾರನ್ನು ಕಿರಣ್ ಫಾಲೋ ಮಾಡಿದ್ದಾನೆ. ಆದರೆ ಕಾರು ತುಂಬಾ ವೇಗವಾಗಿ ಹೋದ ಪರಿಣಾಮ ಆರೋಪಿಗಳು ಕ್ಷಣಾರ್ಧದಲ್ಲೇ ಕಣ್ಮರೆಯಾಗಿದ್ದಾರೆ.

 


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ