Breaking News

ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

Spread the love

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ.

ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ರಭಸ ಜಾಸ್ತಿಯಾದ ಪರಿಣಾಮ ನಾಲ್ವರು ನೀರುಪಾಲಾಗಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಡಿಸಿ ರಾಗಪ್ರಿಯ, ಎಸ್‍ಪಿ ಋಷಿಕೇಶ್ ಸೋನವಣೆ, ಎಐಡಿಸಿ ಪ್ರಕಾಶ್ ರಜಪೂತ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸಂಜೆ ಹೊತ್ತಿನಲ್ಲೆ ಅಗ್ನಿಶಾಮಕ ದಳದಿಂದ ಯುವಕರಿಗಾಗಿ ಶೋಧ ಕಾರ್ಯ ನಡೆಯಿತು.

ಆದರೆ ಕತ್ತಲು ಹೆಚ್ಚಾದ ಹಿನ್ನೆಲೆ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಬೆಳಿಗ್ಗೆಯಿಂದ ಮತ್ತೆ ವಿಶೇಷ ಬೋಟ್ ಮತ್ತು ನುರಿತ ಈಜುಗಾರ ಮೂಲಕ ಶೋಧ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.


Spread the love

About Laxminews 24x7

Check Also

ಕೋರ್ಟ್​​ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆರೋಪಿ ಸಾವು

Spread the loveಬೆಂಗಳೂರು, ಅಕ್ಟೋಬರ್​ 09: ವಿಚಾರಣೆಗೆ ಕರೆತಂದಿದ್ದ ವೇಳೆ ನ್ಯಾಯಾಲಯದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ