Breaking News
Home / ಜಿಲ್ಲೆ / ಯಾದಗಿರಿ / ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ

Spread the love

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ.

ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ರಭಸ ಜಾಸ್ತಿಯಾದ ಪರಿಣಾಮ ನಾಲ್ವರು ನೀರುಪಾಲಾಗಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಡಿಸಿ ರಾಗಪ್ರಿಯ, ಎಸ್‍ಪಿ ಋಷಿಕೇಶ್ ಸೋನವಣೆ, ಎಐಡಿಸಿ ಪ್ರಕಾಶ್ ರಜಪೂತ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಸಂಜೆ ಹೊತ್ತಿನಲ್ಲೆ ಅಗ್ನಿಶಾಮಕ ದಳದಿಂದ ಯುವಕರಿಗಾಗಿ ಶೋಧ ಕಾರ್ಯ ನಡೆಯಿತು.

ಆದರೆ ಕತ್ತಲು ಹೆಚ್ಚಾದ ಹಿನ್ನೆಲೆ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಬೆಳಿಗ್ಗೆಯಿಂದ ಮತ್ತೆ ವಿಶೇಷ ಬೋಟ್ ಮತ್ತು ನುರಿತ ಈಜುಗಾರ ಮೂಲಕ ಶೋಧ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ