Breaking News

ಪಿಎಸ್​ಐ ನೇಮಕಾತಿ ಹಗರಣ: ಡಿವೈಎಸ್​ಪಿ, ಇನ್​ಸ್ಪೆಕ್ಟರ್​ ಸಿಐಡಿ ಬಲೆಗೆ

Spread the love

ಬೆಂಗಳೂರು/ ಕಲಬುರಗಿ: ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ಗಳ 545 ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಪ್ರಕರಣದಲ್ಲಿ ಶಾಮೀಲಾಗಿರುವ ಡಿವೈಎಸ್​ಪಿ, ಇನ್​ಸ್ಪೆಕ್ಟರ್​ನನ್ನು ಸಿಐಡಿ ಕೊನೆಗೂ ಬಂಧಿಸಿದೆ. ಈ ಇಬ್ಬರಿಗೂ ಕೋಳ ತೊಡಿಸುವ ಮೂಲಕ ಬಂಧಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ರಾಯಚೂರು ಜಿಲ್ಲೆ ಲಿಂಗಸೂಗುರು ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಬೆರಳಚ್ಚು ವಿಭಾಗದ ಇನ್​ಸ್ಪೆಕ್ಟರ್​ ಆನಂದ ಮೇತ್ರೆನನ್ನು ಕಲಬುರಗಿಯಲ್ಲಿ ವಿಚಾರಣೆಗಾಗಿ ಕರೆದು ಬಂಧಿಸಲಾಗಿದೆ. ಅದೇ ರೀತಿ ಮೈಸೂರು ರಸ್ತೆ ಕುಂಬಳಗೋಡು ಠಾಣೆ ಕಾನ್​ಸ್ಟೇಬಲ್​ ಸೋಮನಾಥ್​ ಮತ್ತು ಕೆಂಗೇರಿ ಹೋಬಳಿ ಚಿನ್ನಕುರ್ಚಿ ಗ್ರಾಮದ ಸಿ.ಜಿ. ರಾವೇಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಹೈಗ್ರೌಂಡ್ಸ್​ ಠಾಣೆಯಲ್ಲಿ ದಾಖಲಾಗಿದ್ದ ಎ​ಐಆರ್​ಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 15 ಆರೋಪಿಗಳನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ 31 ಆರೋಪಿಗಳು ಸೇರಿ ರಾಜ್ಯದಲ್ಲಿ ಒಟ್ಟಾರೆ 46 ಮಂದಿಯನ್ನು ಸಿಐಡಿ ಬಲೆಗೆ ಬಿದ್ದಿದ್ದಾರೆ. ಇದರಲ್ಲಿ 9 ಮಂದಿ ಪೊಲೀಸರಿದ್ದಾರೆ.

ಮೈಸೂರು ರಸ್ತೆ ಕೆಂಗೇರಿ ಹೋಬಳಿ ಕುಂಬಳಗೋಡು ಸಮೀಪದ ಚಿನ್ನಕುರ್ಚಿ ಗ್ರಾಮದ ಸಿ.ಎಂ. ನಾಗರಾಜ್​, ಈತನ ಸಹೋದರ ಸಿ.ಎಂ. ನಾರಾಯಣ ಹಾಗೂ ಸಿ.ಜಿ. ರಾವೇಂದ್ರ ವಿರುದ್ಧ ಒಎಂಆರ್​ ಶೀಟ್​ ತಿದ್ದಿದ ಆರೋಪದ ಮೇಲೆ ಹೈಗ್ರೌಂಡ್ಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ನಾಗರಾಜನನ್ನು ಬಂಧಿಸಲಾಗಿತ್ತು. ಗುರುವಾರ ರಾವೇಂದ್ರನನ್ನು ಬಂಧಿಸಿದ್ದು, ನಾರಾಯಣ ಪತ್ತೆಗೆ ಬಲೆಬೀಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಸರ್ಕಾರಿ ಕೆಲಸಕ್ಕೆ ಸಿದ್ಧತೆ ನಡೆಸಿದ್ದ ಸಹೋದರರು ಎಸ್​ಐ ನೇಮಕಾತಿ ವಿಚಾರ ತಿಳಿದು ಬೆಂಗಳೂರು ಮೂಲದ ಪ್ರಭಾವಿ ವ್ಯಕ್ತಿ ಮೂಲಕ ಎಸ್​ಐ ಹುದ್ದೆಯ ಡೀಲ್​ ಕುದುರಿಸಿದ್ದರು. ಊರಿನಲ್ಲಿ ಕುಟುಂಬಕ್ಕಿದ್ದ 1 ಎಕರೆ ಜಮೀನನ್ನು ಮಾರಾಟ ಮಾಡಿ ಹಣ ಕೊಟ್ಟಿದ್ದರು. ಬೆಂಗಳೂರಿನ ಪರೀಾ ಕೇಂದ್ರದಲ್ಲಿ ಮೂವರು ಲಿಖಿತ ಪರೀೆ ಬರೆದಿದ್ದರು. ಮೂವರೂ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ